ಉಜಿರೆ: ಚರ್ಚಾ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜು ಪ್ರಥಮ

Upayuktha
0

 

ಉಜಿರೆ: ಅ. 17ರಂದು ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ನಡೆದ ಪೂಜ್ಯ ಶ್ರೀ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯ ಪರ – ವಿರೋಧ ವಿಭಾಗದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜು ಪ್ರಥಮ ಸ್ಥಾನ ಪಡೆದುಕೊಂಡಿದೆ. ದ್ವೀತಿಯ ಸ್ಥಾನವನ್ನು ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜು ಗಳಿಸಿಕೊಂಡಿದೆ. ವೈಯಕ್ತಿಕ ವಿಭಾಗದಲ್ಲಿ ಸೆಂಟ್ ಫಿಲೋಮಿನಾ ಕಾಲೇಜಿನ ಶ್ರೀದೇವಿ ಕೆ ಪಡೆದುಕೊಂಡರು.


ಸ್ಪರ್ಧೆಯು ಆಕರ್ಷಕ ಬಹುಮಾನವನ್ನು ಒಳಗೊಂಡಿದ್ದು, ಪ್ರಥಮ ಬಹುಮಾನವು ಟ್ರೋಫಿ, ಹತ್ತು ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ದ್ವಿತೀಯ ಬಹುಮಾನ ಎಂಟು ಸಾವಿರ ನಗದು ಹಾಗೂ ಟ್ರೋಫಿಯನ್ನು ಒಳಗೊಂಡಿದೆ. ವೈಯಕ್ತಿಕ ಬಹುಮಾನವು ಐದು ಸಾವಿರ ನಗದು ಪ್ರಶಸ್ತಿ ಪತ್ರ ಒಳಗೊಂಡಿದೆ. ಸ್ವರ್ಧೆಯಲ್ಲಿ ಒಟ್ಟು 16 ಕಾಲೇಜು ಆಗಮಿಸಿ, ಸಾಮಾಜಿಕ ಜಾಲತಾಣಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿವೆಯೇ? ಎಂಬ ವಿಷಯದ ಮೇಲೆ ಚರ್ಚೆ ಮಂಡಿಸಿದರು. ತೀರ್ಪುಗಾರರಾಗಿ ಗುರುದೇವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ, ವಾಣಿ ಕಾಲೇಜಿನ ಪ್ರಾಧ್ಯಾಪಕಿ ಡಾ. ಮೈತ್ರಿ ಭಟ್ ಆಗಮಿಸಿ ಕಾರ್ಯಕ್ರಮದ ಕುರಿತು ಅನಿಸಿಕೆ ಹಂಚಿಕೊಂಡರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top