ಶಿಕ್ಷಕರಿಲ್ಲದ ಸಮಾಜವನ್ನು ಊಹಿಸುವುದಕ್ಕೆ ಅಸಾಧ್ಯ: ಸುಬ್ರಹ್ಮಣ್ಯ ನಟ್ಟೋಜ

Upayuktha
0

 ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರ



ಪುತ್ತೂರು: ವೈದ್ಯರಿಲ್ಲದೆ ರೋಗಿಗಳಿಲ್ಲ, ಇಂಜಿನಿಯರ್ಸ್ ಇಲ್ಲದೆ ಕಟ್ಟಡಗಳಿಲ್ಲ ಆದರೆ ಇವರನ್ನೆಲ್ಲ ರೂಪಿಸುವವರು ಶಿಕ್ಷಕರು. ಆದ್ದರಿಂದ ಶಿಕ್ಷಕರೇ ನಿಜವಾಗಿ ದೇಶವನ್ನು ಕಟ್ಟುವವರು. ವಿದ್ಯಾರ್ಥಿಗಳಿಗೆ ಮೌಲ್ಯಗಳನ್ನು ಕೊಡದಿದ್ದರೆ ಅನಾಹುತಗಳಾಗುತ್ತದೆ. ಶಕ್ತಿ ಮೀರಿ ಮಗುವನ್ನು ಬೆಳೆಸುವುದರ ಜೊತೆಗೆ ಸಮಾಜಕ್ಕೆ ನ್ಯಾಯ ಒದಗಿಸಬೇಕಾದ ಕರ್ತವ್ಯ ಶಿಕ್ಷಕರದ್ದು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಆಶ್ರಯದಲ್ಲಿ ಶುಕ್ರವಾರ ಸಂಸ್ಥೆಯ ಹಾಗೂ ಬೆಳ್ಳಾರೆಯ ಜ್ಞಾನಗಂಗಾ ಸಿಬಿಎಸ್‍ಇ ಸಂಸ್ಥೆಯ ಶಿಕ್ಷಕರಿಗಾಗಿ ಏರ್ಪಡಿಸಲಾಗಿದ್ದ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.


ಸಂಪನ್ಮೂಲ ವ್ಯಕ್ತಿಯಾಗಿ ಬಾಗಲಕೋಟೆಯ ಬಾಪೂಜಿ ಇಂಟನ್ರ್ಯಾಷನಲ್ ಸ್ಕೂಲ್ ಇದರ ಪ್ರಾಚಾರ್ಯ ಡಾ. ಮಹೇಶ್ ಕಡಕ್ಕಲಕತ್ ಭಾಗವಹಿಸಿ 'ಹ್ಯಾಪಿ ಕ್ಲಾಸ್ ರೂಮ್' ಎಂಬ ವಿಷಯದ ಬಗೆಗೆ ಕಾರ್ಯಗಾರ ನಡೆಸಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಉಪಸ್ಥಿತರಿದ್ದರು.

ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯ ಪ್ರಾಂಶುಪಾಲೆ ಮಾಲತಿ. ಡಿ ಭಟ್ ಸ್ವಾಗತಿಸಿ, ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ವಂದಿಸಿದರು. ಶಿಕ್ಷಕಿಯರಾದ ರಮ್ಯ ಹಾಗೂ ಕೃತಿಕ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top