ಉಡುಪಿ: ಛಾಯಾಚಿತ್ರದಲ್ಲಿನ ನೈಪುಣ್ಯತೆ ,ವೈಜ್ಞಾನಿಕತೆ ತಾಂತ್ರಿಕತೆ, ಭಾವನಾತ್ಮಕ ಸಂವೇದನಾಶೀಲತೆ ಇವೆಲ್ಲವನ್ನೂ ನಾವು ಗುರುತಿಸಿಕೊಂಡಾಗ ಮಾತ್ರ ಛಾಯಾಗ್ರಹಣ ಎನ್ನುವುದು ಎಷ್ಟು ವಿಶಿಷ್ಟವಾದದ್ದು ಎಂಬ ಅರಿವು ನಮಗೆ ಆಗುತ್ತದೆ. ಹಾಗಾಗಿ ಛಾಯಾಗ್ರಹಣ ವೃತ್ತಿ ಮಾಡುವ ಎಲ್ಲ ಛಾಯಾಗ್ರಾಹಕರು ಅಭಿನಂದನಾರ್ಹರು ಎಂದು ಉಡುಪಿ ರೋಟರಿ ರೋಯಲ್ ನ ಅಧ್ಯಕ್ಷ ರೊ। ಬಾಲಕೃಷ್ಣ ಮದ್ದೋಡಿ ಅಭಿಪ್ರಾಯಪಟ್ಟರು.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ, ರೋಟರಿ ಉಡುಪಿ ರೋಯಲ್ ಸಂಯುಕ್ತವಾಗಿ ಆಯೋಜಿಸಿದ್ದ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಮಾತನಾಡುತ್ತಾ ಒಂದು ಕ್ಷಣದ ಸುಂದರ ಛಾಯಾಚಿತ್ರಕ್ಕಾಗಿ ಗಂಟೆಗಟ್ಟಲೆ, ದಿನಗಟ್ಟಲೆ, ವರ್ಷಗಟ್ಟಲೆ ಪೂರ್ತಿ ಕಾದು ಅದನ್ನು ವಿಶಿಷ್ಟ ರೀತಿಯಲ್ಲಿ ನಮಗೆ ಒಪ್ಪಿಸುವ ಛಾಯಾಗ್ರಾಹಕರ ಕಾರ್ಯ ಮೆಚ್ಚುವಂತಹುದು ಎಂದು ಅವರು ಪ್ರಶಂಸಿಸಿದರು.
ಇನ್ನೋರ್ವ ಅತಿಥಿ ಜಿಲ್ಲಾಧ್ಯಕ್ಷ ಆನಂದ ಎನ್ ಕುಂಪಲ ಮಾತನಾಡಿ ನಮ್ಮ ಛಾಯಾಗ್ರಹಣ ಕ್ಷೇತ್ರದಲ್ಲಿ ನಮ್ಮತನವನ್ನು ಕಂಡುಕೊಂಡು, ಸಾಮಾಜಿಕವಾಗಿ ಕೂಡಾ ನಾವು ಮುಂದೆ ಬರಬೇಕೆಂದರು. ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಹಫೀಜ್ ರೆಹಮಾನ್, ಸುವರ್ಣ ಕಾರ್ಯದರ್ಶಿ, ಪ್ರವೀಣ್ ಕೊರೆಯ ಉಪಸ್ಥಿತರಿದ್ದರು.
ಹಿರಿಯ ಛಾಯಾಗ್ರಾಹಕ ಜಗನ್ನಾಥ ಶೆಟ್ಟಿ, ಹಾಗೂ ಚಂದ್ರಶೇಖರ್ ಅಂಬಲಪಾಡಿ ಇವರಿಗೆ ಛಾಯಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ನಡೆದ ಛಾಯಾಚಿತ್ರ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ದೇಶದ ಗಡಿ ಕಾಯುವ ಯೋಧ ಬಾಲರಾಜ್ ರವರನ್ನು ಅಭಿನಂದಿಸಲಾಯಿತು. ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಉಡುಪಿ ವಲಯಾಧ್ಯಕ್ಷ ಜನಾರ್ದನ್ ಕೊಡವೂರು ಸ್ವಾಗತಿಸಿದರು. ಪ್ರಸ್ತಾವನೆಯ ರೂಪದಲ್ಲಿ ಪೂರ್ಣಿಮಾ ಜನಾರ್ದನ್ ಕವನ ವಾಚಿಸಿದರು. ಕೋಶಾಧ್ಯಕ್ಷ ದಿವಾಕರ ಹಿರಿಯಡ್ಕ ಧನ್ಯವಾದವಿತ್ತರು. ರಾಘವೇಂದ್ರ ಶೇರಿಗಾರ್ನಿ ರೂಪಿಸಿದರು.
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ