ಬೆಂಗಳೂರು:ಭೂದಾನ ಚಳವಳಿಯ ನೇತಾರ ವಿನೋಬಾ ಹಾಗೂ ಮಹಾದೇವಿ ತಾಯಿಯವರ ಅನುಯಾಯಿಗಳಾದ ಗಿರಿಜಾ ಜಿ. ಹೆಗ್ಡೆ ( ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಸಂಬಂಧಿ) ಅವರಿಗೆ 76ರ ಅಮೃತ ಮಹೋತ್ಸವಕ್ಕೆ ಅಭಿನಂದನೆಗಳು ಹಾಗೂ ಶುಭಾಶಯಗಳನ್ನು ತಿಳಿಸಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಗಾಂಧಿ ಭವನದ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಗಾಂಧಿ ಶಾಂತಿ ಪ್ರತಿಷ್ಠಾನದ ಖಜಾಂಚಿ ಡಾ.ಸಿಸಿರಾ, ಗಣಿತಶಾಸ್ತ್ರಜ್ಞ ಡಾ.ಕೆ.ಸಿ.ಮುನಿಯಪ್ಪ, ಅಂಕಣಕಾರ ಡಾ. ಗುರುರಾಜ ಪೋಶೆಟ್ಟಿಹಳ್ಳಿ, ಗಾಂಧಿ ಭವನದ ಸಿಬ್ಬಂದಿ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ