ಖೋಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Upayuktha
0



ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನೆಹರೂನಗರದ ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಖೋಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದೆ. ಬಾಲಕಿಯರ ವಿಭಾಗದ ಪಂದ್ಯಾಟದಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ದಿವ್ಯಾ ಎಂ ಅತ್ಯುತ್ತಮ ಆಲ್ ರೌಂಡರ್ ಪ್ರಶಸ್ತಿ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪ್ರತೀಕ್ಷಾ ಸಿ ಎಚ್ ಅತ್ಯುತ್ತಮ ಚೇಸರ್ ಪ್ರಶಸ್ತಿ ಪಡೆದರು. ಬಾಲಕರ ವಿಭಾಗದ ಪಂದ್ಯಾಟದಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ನಿತಿನ್ ಕುಮಾರ್ ಅತ್ಯುತ್ತಮ ಆಲ್ ರೌಂಡರ್ ಪ್ರಶಸ್ತಿ ಮತ್ತು ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ರಂಜನ್ ಕೆ.ಆರ್ ಅತ್ಯುತ್ತಮ ಚೇಸರ್ ಪ್ರಶಸ್ತಿ ಪಡೆದರು.


ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ನಿತಿನ್ ಕುಮಾರ್, ವಾಣಿಜ್ಯ ವಿಭಾಗದ ಎಚ್ ಅಭಿರಾಮ್, ವಿಜ್ಞಾನ ವಿಭಾಗದ ಮಂಜುನಾಥ್ ಎಸ್, ಸಾತ್ವಿಕ್ ಆರ್, ನಂದನ್ ಗೌಡ, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವರುಣ್ ಕುಮಾರ್, ಜೀವನ್ ಎಸ್, ದೇಶಿಕ್ ಕೆ, ರಂಜನ್ ಕೆ.ಆರ್, ವಿಜ್ಞಾನ ವಿಭಾಗದ ಎಲ್. ಧನುಷ್, ಅಶ್ವಿತ್ ಭಂಡಾರಿ, ಮನ್ವಿತ್ ಬಿ ಗೌಡ, ಯಶವಂತ್ ಡಿ.ಎಸ್, ಶ್ರೇಯಸ್ ಪಿ, ಸುಹಾಸ್ ಕೆ ಭಾಗವಹಿಸಿದ್ದರು.


ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ದಿವ್ಯ ಎಂ, ಭೂಮಿಕಾ ಬಿ.ಬಿ, ವಾಣಿಜ್ಯ ವಿಭಾಗದ ಜ್ಯೋತಿಕಾ ಪಿ, ಹಿತಶ್ರೀ, ವಿಜ್ಞಾನ ವಿಭಾಗದ ಪೂರ್ವಿಕ ಎ. ಎಸ್, ಪ್ರತೀಕ್ಷಾ ಸಿ ಎಚ್,  ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಸಂಸ್ಕ್ರತಿ ಜೈನ್, ದಿಶಾ ವಿ, ಪ್ರಕೃತಿ ಬಿ.ಯು,ನಿಶ್ಮಿತಾ, ಕಲಾ ವಿಭಾಗದ ಶಿವಾನಿ ಪಿ.ಕೆ ಭಾಗವಹಿಸಿದ್ದರು.


ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್  ರವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ತಂಡದ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Advt Slider:
To Top