ಬೆಂಗಳೂರು: ದಕ್ಷಿಣ ಬೆಂಗಳೂರಿನ ಸಾಂಸ್ಕೃತಿಕ ಹೆಗ್ಗುರುತು ಬಸವನಗುಡಿ ಕ್ಷೇತ್ರದಲ್ಲಿ ಸಾರ್ಥಕ ಸಾಧಕರನ್ನು ಗುರುತಿಸಿ ಗೌರವಿಸಿರುವುದು ಹೆಮ್ಮೆಯ ಸಂಗತಿ ಎಂದು ಬಸವನಗುಡಿ ಕ್ಷೇತ್ರದ ಶಾಸಕ ರವಿ ಸುಬ್ರಹ್ಮಣ್ಯ ಅಭಿಪ್ರಾಯ ಪಟ್ಟರು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಂಗಸಂಸ್ಥೆ, ಬಸವನಗುಡಿ ಬ್ರಾಹ್ಮಣ ಸಭಾ ವತಿಯಿಂದ ಎನ್ ಆರ್ ಕಾಲೋನಿಯ ಡಾ. ಸಿ ಅಶ್ವಥ್ ಕಲಾಭವನದಲ್ಲಿ ನಡೆದ ಸಮಾರಂಭವನ್ನು ಎಕೆ ಬಿಎಮ್ಎಸ್ ಅಧ್ಯಕ್ಷರು, ಹಿರಿಯ ನ್ಯಾಯವಾದಿಗಳು, ಮಾಜಿ ಅಡ್ವಕೇಟ್ ಜನರಲ್, ಲೋಕ ಶಿಕ್ಷಣ ಟ್ರಸ್ಟ್ ನ ಟ್ರಸ್ಟಿ ಅಶೋಕ ಹಾರನಹಳ್ಳಿ ಜ್ಯೋತಿ ಬೆಳಗಿ ಉದ್ಘಾಟಿಸಿದರು.
ಕ್ಷೇತ್ರದ ಜನಪ್ರಿಯ ಶಾಸಕರಾದ ಎಲ್ಎ ರವಿ ಸುಬ್ರಮಣ್ಯ, ಚಿಕ್ಕಪೇಟೆ ಕ್ಷೇತ್ರದ ಶಾಸಕರಾದ ಡಾ. ಉದಯ ಗರುಡಾಚಾರ್, ಗರುಡ ಫೌಂಡೇಶನ ಮುಖ್ಯಸ್ಥೆ ಶ್ರೀಮತಿ ಮೇದಿನಿ ಉದಯ ಗರುಡಾಚಾರ್ ಮುಂತಾದ ಗಣ್ಯಮಾನ್ಯರ ಉಪಸ್ಥಿತಿಯಲ್ಲಿ ಸಂಸ್ಕೃತ ಚಿಂತಕ, ಅಂಕಣಕಾರ ಡಾ. ಗುರುರಾಜ ಪೋಶೆಟ್ಟಿಹಳ್ಳಿ, ವಿಪ್ರಸಮುದಾಯದ ಹಿರಿಯ ಮುಖಂಡರು ಜ್ಯೋತಿ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ಎಂ ನರಸಿಂಹ, ವೈದ್ಯ ಪದವಿಯಲ್ಲಿ ಚಿನ್ನದ ಪದಕ ಮೊದಲ ರಾಂಕ್ ವಿಜೇತೆ ಡಾ.ಸಂಜನಾ ಕುಮಾರ್ ರವರುಗಳಿಗೆ "ಬಸವನಗುಡಿ ವಿಪ್ರರತ್ನ" ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು
ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಹಿಳಾ ವಿಭಾಗದ ರಾಜ್ಯ ಸಂಚಾಲಕಿ ಡಾ. ಶುಭಮಂಗಳ ಸುನಿಲ್ ಭಾಗವಹಿಸಿದ್ದರು.
ಬಸವನಗುಡಿ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಎಸ್ ಆರ್ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸದಸ್ಯತ್ವ ಅಭಿಯಾನ ಬಸವನಗುಡಿ ಕ್ಷೇತ್ರದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಪದಾಧಿಕಾರಿಗಳಾದ ಉಪಾಧ್ಯಕ್ಷ ಡಿ.ವಿ ರಾಜೇಂದ್ರ ಪ್ರಸಾದ್, ಹೆಚ್.ಆರ್ ಸುರೇಶ್, ಸಹಕಾರ್ಯದರ್ಶಿ ಹೆಚ್. ಸಿ ಪುರುಷೋತ್ತಮ್, ಟಿ.ಎಲ್.ಎಸ್ ಕುಮಾರ್, ಆರ್ .ರವಿಕುಮಾರ್ ರವರುಗಳಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಬಸವನಗುಡಿ ಬ್ರಾಹ್ಮಣ ಮಹಾಸಭಾ ಕಾರ್ಯಾಧ್ಯಕ್ಷ ಟಿ.ಎಸ್ ಸುಬ್ರಹ್ಮಣ್ಯ, ಉಪಾಧ್ಯಕ್ಷ ಬಿ ಎನ್. ಜಯಸಿಂಹ, ಖಜಾಂಚಿ ಪ್ರೊ. ಕೆ.ವಿ ಮುರುಳಿಧರ ಶರ್ಮ, ಮಹಿಳಾ ವಿಭಾಗದ ಅಧ್ಯಕ್ಷೆ ವೈಜಯಂತಿ ಎಂ ಶರ್ಮ, ಯುವ ವಿಭಾಗದ ಅಧ್ಯಕ್ಷ ಕೆ.ಎನ್ ರಾಘವೇಂದ್ರ ವಶಿಷ್ಠ ಉಪಸ್ಥಿತ ರಿದ್ದರು.
ಪ್ರಧಾನ ಕಾರ್ಯದರ್ಶಿ ರಥಯಾತ್ರೆ ಸುರೇಶ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ವಿಪ್ರ ಸಮುದಾಯದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಣಕ್ಕೆ ಇಳಿಸಿ ಗೆಲ್ಲಿಸಬೇಕೆಂದು ವೇದಿಕೆಯ ಮೇಲೆ ಉಪಸ್ಥಿತರಿದ್ದ ಜನಪ್ರತಿನಿಧಿಗಳಿಗೆ ಮನವಿ ಮಾಡಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ