ಸೆ.16: ಉಜಿರೆಯಲ್ಲಿ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ

Upayuktha
0



ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಮಂಗಳೂರು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ- ಇವರ ಜಂಟಿ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ -2022-23 ಶುಕ್ರವಾರ (ಸೆ.16) ಉಜಿರೆಯ ಶ್ರೀ ಸಿದ್ಧವನ ಗುರುಕುಲದ ಸಭಾಭವನದಲ್ಲಿ ನಡೆಯಲಿದೆ.


ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ  ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.


ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಸಕಾಲ ಇಲಾಖೆ ಸಚಿವ ಬಿ.ಸಿ ನಾಗೇಶ್‌ ಪಾಲ್ಗೊಳ್ಳಲಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ದ.ಕ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಸಿ.ಡಿ. ಜಯಣ್ಣ, ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನ್‌ ಸೊಸೈಟಿ ಕಾರ್ಯದರ್ಶಿ ಡಾ. ಎಸ್‌. ಸತೀಶ್ಚಂದ್ರ  ಭಾಗವಹಿಸಲಿದ್ದಾರೆ.


ಇದೇ ಸಂದರ್ಭದಲ್ಲಿ ನವ ವಿನ್ಯಾಸದ ಸುವಿದ್ಯಾ ತಂತ್ರಾಂಶ ಬಿಡುಗಡೆ ಆಗಲಿದೆ. ಸೇವಾ ಇವೃತ್ತ ಪ್ರಾಚಾರ್ಯರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಧನ ನೀಡಿ ಸನ್ಮಾನ, ಯೂಟ್ಯೂಬ್ ತರಗತಿಗಳನ್ನು ನಡೆಸಿದ ಪ್ರಾಚಾರ್ಯರು, ಉಪನ್ಯಾಸಕರಿಗೆ ಸನ್ಮಾನ ಹಾಗೂ ಕೋವಿಡ್‌ಗೆ ತುತ್ತಾಗಿ ಸಾವನ್ನಪ್ಪಿದ ತರಗತಿಗಳನ್ನು ನಡೆಸಿದ ಉಪನ್ಯಾಸಕರ ಕುಟುಂಬಕ್ಕೆ ಸಹಾಯಧನ ವಿತರಣೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top