ಬೆಂಗಳೂರು: ಆರ್ಕಿಡ್ಸ್ ಶಾಲೆಯ ಸ್ವರ್ಣಲತಾ‌ ಅತ್ತಾವರ್ ಅವರಿಗೆ ಅತ್ಯುತ್ತಮ ಆಡಳಿತಾಧಿಕಾರಿ ಪ್ರಶಸ್ತಿ

Upayuktha
0



ಬೆಂಗಳೂರು: ಬೆಂಗಳೂರು ಉತ್ತರ ವಲಯದ ಶಿಕ್ಷಣ ಇಲಾಖೆ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಆರ್ಕಿಡ್ಡ್ಸ್ ಅಂತಾರಾಷ್ಟ್ರೀಯ ಶಾಲೆ, ಜಾಲಹಳ್ಳಿ ಶಾಖೆಯ ನಿರ್ವಹಣಾ ಅಧಿಕಾರಿ ಶ್ರೀಮತಿ ಸ್ವರ್ಣಲತಾ ಅತ್ತಾವರ ಅವರು ಅತ್ಯುತ್ತಮ ಆಡಳಿತಾಧಿಕಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.


ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶ್ರೀಮತಿ ಸ್ವರ್ಣಲತಾ, "ನನ್ನ ಪ್ರಯತ್ನವನ್ನು ಗುರುತಿಸಿ ಈ ಗೌರವವನ್ನು ನೀಡಿದ್ದಕ್ಕಾಗಿ ಸಂಘಟಕರಿಗೆ ನಾನು ಕೃತಜ್ಞಳಾಗಿದ್ದೇನೆ. ನನಗೆ ಪ್ರೋತ್ಸಾಹ ನೀಡಿದ ಆರ್ಕಿಡ್ಸ್- ಅಂತಾರಾಷ್ಟ್ರೀಯ ಶಾಲೆಯ ಆಡಳಿತ ಮಂಡಳಿಗೆ ಧನ್ಯವಾದಗಳು” ಎಂದರು.


ಡಾ. ಸಿ ಎನ್ ಅಶ್ವಥ್ ನಾರಾಯಣ ಫೌಂಡೇಶನ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಂಗಳೂರು ಉತ್ತರ ವಲಯ, ಮತ್ತು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ಸ್ವರ್ಣಲತಾ ಅವರನ್ನು ಬೆಂಗಳೂರು ಉತ್ತರ ವಲಯದ ಬ್ಲಾಕ್ ಶಿಕ್ಷಣಾಧಿಕಾರಿ ಉಮಾ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಸದಾನಂದ ಗೌಡ, ಸಚಿವ ಡಾ ಸಿ ಎನ್ ಅಶ್ವತ್ಥ್ ನಾರಾಯಣ್, ಹಾಗೂ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top