ವಿಶ್ವಸಂಸ್ಥೆಯ ಮಾನವ ಹಕ್ಕು ಆಯೋಗಕ್ಕೆ ಕನ್ನಡತಿ ನೇಮಕ

Upayuktha
0

ಕೋಲಾರ: ವಿಶ್ವಸಂಸ್ಥೆಯ ಮಾನವ ಹಕ್ಕು ಆಯೋಗಕ್ಕೆ (ಯು.ಎನ್​‌.ಎಚ್​.ಆರ್.​ಸಿ) ಕೋಲಾರ ಜಿಲ್ಲೆಯ ಡಾ. ಕೆ.ಪಿ.ಅಶ್ವಿನಿ ಅವರು ನೇಮಕವಾಗಿದ್ದಾರೆ. ಇವರು ಮೂಲತಃ ಕೋಲಾರ ತಾಲೂಕಿನ ಕಸಬಾ ಕುರುಬರಹಳ್ಳಿಯವರು. ವಿ. ಪ್ರಸನ್ನಕುಮಾರ್​ ಹಾಗೂ ಜಯಮ್ಮ ದಂಪತಿಗಳ ಮಗಳು.


ಬೆಂಗಳೂರಿನ ಮೌಂಟ್​ ಕಾರ್ಮೆಲ್​ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಬೆಂಗಳೂರಿನ ಸೇಂಟ್​ ಜೋಸೆಫ್​ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಎಂ.ಫಿಲ್​, ಪಿಎಚ್​ಡಿ ಪದವಿಯನ್ನು ದೆಹಲಿಯ ಜವಾಹರಲಾಲ್​ ನೆಹರು ವಿಶ್ವವಿದ್ಯಾಲಯ (ಜೆಎನ್​ಯು) ದಿಂದ ಸ್ವೀಕರಿಸಿದ್ದಾರೆ.


ಮೌಂಟ್​ ಕಾರ್ಮೆಲ್​ ಕಾಲೇಜಿನಲ್ಲಿ ಕೆಲ ಕಾಲ ಉಪನ್ಯಾಸಕರಾಗಿಯೂ ಕರ್ತವ್ಯ ನಿರ್ವಹಿಸಿದ್ದರು ಅಶ್ವಿನಿ‌. ಆಮ್ನೆಸ್ಟಿ ಇಂಟರ್​ನ್ಯಾಷನಲ್​ ಸಂಸ್ಥೆಯಲ್ಲಿ ಕೆಲಸ ಮಾಡುತ್ತಾ ಗಣಿಗಾರಿಕೆಯಿಂದ ಒಡಿಶಾ, ಛತ್ತೀಸ್​ಘಡ ರಾಜ್ಯಗಳ ಆದಿವಾಸಿಗಳ ಪ್ರದೇಶಗಳಲ್ಲಿ ಆದಿವಾಸಿಗಳ ಮೇಲೆ ಉಂಟಾಗಿರುವ ಪರಿಣಾಮಗಳ ಬಗ್ಗೆ ವಿಶೇಷ ಅಧ್ಯಯನವನ್ನು ಕೈಗೊಂಡಿದ್ದರು. ಜೊತೆಗೆ ನಾಲ್ಕು ವರ್ಷ ಸೇಂಟ್​ ಜೋಸೆಫ್​​ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.


ಪ್ರಸ್ತುತ ಇವರು ವಿಶ್ವಸಂಸ್ಥೆಯ ಮಾನವ ಹಕ್ಕು ಆಯೋಗಕ್ಕೆ ನೇಮಕಗೊಂಡಿದ್ದಾರೆ. ಜಿನೀವಾ ಮೂಲದ 47 ಸದಸ್ಯರ ವಿಶ್ವಸಂಸ್ಥೆಯ ಮಾನವ ಹಕ್ಕು ಸಂಸ್ಥೆ ಇವರ ನೇಮಕಾತಿಯನ್ನು ಅನುಮೋದಿಸಿದೆ. ಈ ಮೂಲಕ ಅಶ್ವಿನಿ ಅವರು ಕನ್ನಡಿಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top