ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ 15 ಘಟಕಗಳ ಘಟಕಾಧಿಕಾರಿಗಳ ಸಭೆ ನಗರದ ಮೇರಿಹಿಲ್ನಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ಇಂದು ಜರುಗಿತು. ಗೃಹರಕ್ಷಕ ದಳದ ಸಮಾದೇಷ್ಟ ಡಾ. ಮುರಲೀ ಮೋಹನ್ ಚೂಂತಾರು ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಮುಂಬರುವ ಚುನಾವಣಾ ಕರ್ತವ್ಯಕ್ಕೆ ಗೃಹರಕ್ಷಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸುವ ಬಗ್ಗೆ ಚರ್ಚಿಸಲಾಯಿತು. ಗೃಹರಕ್ಷಕರ ಕ್ಷೇಮಾಭಿವೃದ್ದಿ ನಿಧಿಗೆ ವಂತಿಗೆಯನ್ನು ಕಟ್ಟಲು ಬಾಕಿ ಇರುವ ಗೃಹರಕ್ಷಕರ ಬಗ್ಗೆ, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಚರ್ಚಿಸಲಾಯಿತು. ಮೂರು ವರ್ಷಗಳನ್ನು ಮೀರಿದ ಗೃಹರಕ್ಷಕರು ನವೀಕರಣ ಮಾಡಿಸಲು ಸೂಚಿಸಲಾಯಿತು. ಕಛೇರಿಯ ಅಧೀಕ್ಷಕ ರತ್ನಾಕರ್ ಮತ್ತು ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿ.ಎಸ್ ರವರು ಉಪಸ್ಥಿತರಿದ್ದರು
ಈ ಸಂದರ್ಭದಲ್ಲಿ 15 ಘಟಕಗಳ ಘಟಕಾಧಿಕಾರಿಗಳಾದ ಮಾರ್ಕ್ಶೇರ್, ಸೀನಿಯರ್ ಪ್ಲಟೂನ್ ಕಮಾಂಡರ್, ಮಂಗಳೂರು ಘಟಕ, ಐತಪ್ಪ, ಘಟಕಾಧಿಕಾರಿ, ಬಂಟ್ವಾಳ ಘಟಕ, ಅಭಿಮನ್ಯು ರೈ, ಘಟಕಾಧಿಕಾರಿ ಪುತ್ತೂರು ಘಟಕ, ತೀರ್ಥೇಶ್ ಘಟಕಾಧಿಕಾರಿ ಕಡಬ ಘಟಕ, ಪ್ರಭಾರ ಘಟಕಾಧಿಕಾರಿಗಳಾದ ಎಂ. ಭಾಸ್ಕರ್, ಉಳ್ಳಾಲ ಘಟಕ, ಲೋಕೇಶ್, ಮೂಲ್ಕಿ ಘಟಕ, ದಿನೇಶ್ ಉಪ್ಪಿನಂಗಡಿ ಘಟಕ, ರಮೇಶ್ ಸುರತ್ಕಲ್ ಘಟಕ, ಸಂಜೀವ, ವಿಟ್ಲ ಘಟಕ, ಜಯಾನಂದ ಬೆಳ್ತಂಗಡಿ ಘಟಕ, ಗಿರಿಧರ್, ಸುಳ್ಯ ಘಟಕ, ವಸಂತ ಕುಮಾರ್, ಬೆಳ್ಳಾರೆ ಘಟಕ, ಸೆಕ್ಷನ್ ಲೀಡರ್ ಗಂಗಾಧರ, ಪಣಂಬೂರು ಘಟಕ, ಜಯಂತ, ಸುಬ್ರಹ್ಮಣ್ಯ ಘಟಕ ಇವರುಗಳು ಉಪಸ್ಥಿತರಿದ್ದರು. ಉಪಸಮಾದೇಷ್ಟರಾದ ರಮೇಶ್ ಅವರು ಸ್ವಾಗತಿಸಿದರು.