ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜಿನ ತೃತೀಯ ವರ್ಷದ ಬಿಕಾಂ ವಿದ್ಯಾರ್ಥಿ ಹೃಷಿಕೇಶ್ ಭಟ್ ಅವರು ಇನ್ಸ್ಟಿಟ್ಯೂಟ್ ಆಫ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಸಿಎಂಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿದ್ದು ಆಲ್ ಇಂಡಿಯಾದಲ್ಲಿ 23 ನೇ ರ್ಯಾಂಕ್ ಗಳಿಸಿರುತ್ತಾರೆ. ಹಾಗೆಯೇ ಕರ್ನಾಟಕದಲ್ಲಿ ಎರಡನೇಯ ರ್ಯಾಂಕ್ ಗಳಿಸಿರುತ್ತಾರೆ.
ಮೂಲತಃ ಪುತ್ತೂರಿನವರಾಗಿರುವ ಇವರು ರತ್ನಾಕರ್ ಭಟ್ ಹಾಗೂ ವಿನಯ ಭಟ್ ದಂಪತಿಗಳ ಪುತ್ರ.ಪ್ರಸ್ತುತ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ತೃತೀಯ ವರ್ಷದ ಬಿಕಾಂ ವ್ಯಾಸಾಂಗ ಮಾಡುತ್ತಿರುವ ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ಉಪನ್ಯಾಸಕೇತರ ವೃಂದ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ