ಅ. 15-16: ಪಂಡಿತ್ ಮಲ್ಲಿಕಾರ್ಜುನ ಮನ್ಸೂರ್ ಸ್ಮರಣಾರ್ಥ 17ನೇ ‘ಧ್ವನಿ’ ಹಿಂದೂಸ್ತಾನಿ ಸಂಗೀತ ಕಾರ್ಯಕ್ರಮ

Upayuktha
1 minute read
0


ಬೆಂಗಳೂರು: ಹಿಂದೂಸ್ಥಾನಿ ಸಂಗೀತ ದಿಗ್ಗಜ ಪಂಡಿತ್ ಮಲ್ಲಿಕಾರ್ಜುನ ಮನ್ಸೂರ್ ಅವರ ಸ್ಮರಣಾರ್ಥ `ಧ್ವನಿ’ ಸಂಗೀತ ಕಾರ್ಯಕ್ರಮವನ್ನು ಬೆಂಗಳೂರು ಕಿಡ್ನಿ ಫೌಂಡೇಶನ್ ಸಂಸ್ಥೆ ಪ್ರತಿ ವರ್ಷವೂ ಆಯೋಜಿಸುತ್ತಾ ಬಂದಿದೆ. ಈ ವರ್ಷ 17ನೇ ‘ಧ್ವನಿ’ ಸಂಗೀತ ಸಂಭ್ರಮವನ್ನು ಇದೇ ಅ. 15-16 ಶನಿವಾರ-ಭಾನುವಾರದಂದು ನಗರದ ಜಯನಗರ 8ನೇ ಬ್ಲಾಕ್ ನಲ್ಲಿರುವ ಜೆಎಸ್‍ಎಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. 


ಬಿಕೆಎಫ್ ಸಂಸ್ಥೆಯು ಪ್ರತಿವರ್ಷ ಪಂಡಿತ್ ಮಲ್ಲಿಕಾರ್ಜುನ ಮನ್ಸೂರ್ ಸಂಸ್ಮರಣ ಸಂಗೀತ್ಸೊತ್ಸವ ಸಂದರ್ಭದಲ್ಲಿ ನಾಡಿನ ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಪ್ರಸಿದ್ಧ ಕಲಾವಿದ ಹಾಗೂ ಗುರುವಿಗೆ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತದೆ. ಈ ವರ್ಷ ಹಿಂದೂಸ್ತಾನಿ ಸಂಗೀತ ಪ್ರಪಂಚಕ್ಕೆ ಅನುಪಮ ಕೊಡುಗೆ ನೀಡಿರುವ ಪಂಡಿತ್ ಅಜಯ್ ಚಕ್ರವರ್ತಿ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. 


ಅ 15 ಶನಿವಾರ ಸಂಜೆ 6.45ಕ್ಕೆ ನೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ನ್ಯಾ|| ಕೃಷ್ಣ ಎಸ್.ದೀಕ್ಷಿತ್ ಅವರು ಮುಖ್ಯ ಅತಿಥಿಗಳಾಗಿ ಮತ್ತು ಖ್ಯಾತ ಗಾಯಕ ಪಂ ಡಾ.ನಾಗರಾಜ್ ರಾವ್ ಹವಲ್ದಾರ್ ಹಾಗೂ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪನಿರ್ದೇಶಕ ಡಾ.ಜಿ.ಎ. ಶ್ರೀನಿವಾಸ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಆರಂಭದಲ್ಲಿ ಧನಂಜಯ ಹೆಗ್ಡೆ ರವರ ಸಂಗೀತ ಕಛೇರಿ ಏರ್ಪಾಡಾಗಿದೆ.


ಅ.16 ಭಾನುವಾರ ಬೆಳಿಗ್ಗೆ 10 ರಿಂದ ಸಮೀರ್ ಕುಲಕರ್ಣಿ ಗಾಯನ; 11.15 ರಿಂದ ರಾಜಾಸ್ತಾನದ ಕಲಾವಿದರಾದ ಮಂಗಾನಿಯರ್ಸ್– ಉಸ್ತಾದ್ ಅನ್ವರ ಖಾನ್ ಮತ್ತು ತಂಡದ ಗಾಯನ; ಸಂಜೆ 5.30ರಿಂದ ಕುಮಾರಿ ಪೂರ್ವಿ ಗರುಡ್‍ರವರ ಹಾಡುಗಾರಿಕೆ; 7.15 ರಿಂದ ಪಂ. ರೋನು ಮಂಜುಮದಾರ್ ಮತ್ತು ಅನಿಲ್ ಶ್ರೀನಿವಾಸನ್ ರವರ ಜುಗಲ್ಬಂದಿ ನಡೆಯಲಿದೆ.


ಕರ್ನಾಟಕದ ಬೆಂಗಳೂರು ಕಿಡ್ನಿ ಫೌಂಡೇಶನ್ ಸಂಸ್ಥೆಯು ಮೂತ್ರಜನಕಾಂಗ, ಮೂತ್ರಪಿಂಡಗಳಿಗೆ ಸಂಬಂಧಿಸಿದ ಕಾಯಿಲೆಗಳ ಚಿಕಿತ್ಸೆಗಾಗಿ ಮುಂಚೂಣಿಯಲ್ಲಿರುವ ಸಂಸ್ಥೆಯಾಗಿದೆ. (ಕಿಡ್ನಿ ಫೌಂಡೇಶನ್ ಟ್ರಸ್ಟ್) 1979 ರಲ್ಲಿ ಪ್ರಾರಂಭವಾದ ಸಂಸ್ಥೆಯು ಮೂತ್ರಜನಕಾಂಗ ಸಂಬಂಧಿತ ರೋಗಗಳಿಗೆ ಅತ್ಯಂತ ಕಡಿಮೆ ಖರ್ಚಿನಲ್ಲಿ ಅತ್ಯುತ್ತಮ ಗುಣಮಟ್ಟದ ಚಿಕಿತ್ಸೆಯನ್ನು ಒದಗಿಸುವ ಕೇಂದ್ರಸ್ಥಾನವಾಗಿ ರೂಪಗೊಂಡಿದೆ.


ಬೆಂಗಳೂರು ಕಿಡ್ನಿ ಫೌಂಡೇಶನ್ ಹಲವು ಪ್ರಥಮಗಳಿಗೆ ಸಾಕ್ಷಿಯಾಗಿದೆ. ಈ ಪ್ರತಿಷ್ಠಿತ ಸಂಸ್ಥೆಯ ನೂತನ ಡಯಾಲಿಸಿಸ್ ಕೇಂದ್ರದ ನಿರ್ಮಾಣ ಪೂರ್ಣಗೊಂಡು ಕಾರ್ಯಾರಂಭ ಮಾಡುತ್ತಲಿದ್ದು. ಈ ನೂತನ ಕೇಂದ್ರವು 85 ಡಯಾಲಿಸಿಸ್ ಯಂತ್ರಗಳನ್ನು ಹೊಂದಿದ್ದು, ಆರ್ಥಿಕವಾಗಿ ಕೆಳಸ್ತರದ ರೋಗಗಳಿಗೆ ಅನುಕೂಲಕರವಾಗಿದೆ. ಈ ನೂತನ ಡಯಾಲಿಸಿಸ್ ಕೇಂದ್ರವು ಡಯಾಲಿಸಿಸ್ ತಂತ್ರಜ್ಞರಿಗೆ ತರಬೇತಿಯನ್ನು ಸಹ ನೀಡಲಾಗುವುದು. 


ಕಳೆದ ಹದಿನಾರು ವರ್ಷಗಳಿಂದ ಈ ಸಂಗೀತ ಉತ್ಸವ ಯಶಸ್ವಿಯಾಗಿ ನಡೆದು ಬರಲು ದಾನಿಗಳ, ಸಂಗೀತ ಕಲಾರಾಧಕರ, ಸಮಾಜ ಶ್ರೇಯೋಭಿಲಾಷಿಗಳ ಒತ್ತಾಸೆಯೇ ಕಾರಣವಾಗಿದೆ. ಸಂಗೀತ ಉತ್ಸವವಗಳ ಮೂಲಕ ಸಂಗ್ರಹವಾದ ಹಣ ಬಡರೋಗಿಗಳ  ಉಚಿತ ಡಯಾಲಿಸಿಸ್ ವೆಚ್ಚವನ್ನು ಭರಿಸಲು ಹಾಗೂ ಬಿಕೆಎಫ್‍ನ ಮೂಲಧನ ಕ್ರೋಢೀಕರಣಕ್ಕೆ ಸಹಾಯಕವಾಗಿದ್ದು, ಸಂಸ್ಥೆಯ ಧ್ಯೇಯೋದ್ದೇಶಗಳನ್ನು ಸಾಕಾರಗೊಳಿಸಲು ಸಹಾಯಕವಾಗುತ್ತದೆ.  ಎಂದು ಸಂಸ್ಥೆಯ ಅಧ್ಯಕ್ಷ ಶ್ರೀರಾಮ್ ರವರು ತಿಳಿಸಿರುತ್ತಾರೆ.

ವಿವರಗಳಿಗೆ: 9901788354

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top