ಗೋವಾ: ಪುನೀತ್ ಅಭಿಮಾನಿ ಬಳಗದಿಂದ ಕಾರ್ಯಕ್ರಮ

Upayuktha
0

ಪಣಜಿ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರಿಗೆ ಕರ್ನಾಟಕ ರತ್ನ ಗೌರವ ನೀಡಲಾಗಿದೆ. ಸಾರ್ವಜನಿಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿದ ಸೇವೆ ಅಪಾರವಾದದ್ದು. ಅವರು ಕೊಹಿನೂರು ವಜ್ರ ಎಂದು ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯದ್ಯಕ್ಷ ಡಾ. ಸಿದ್ದಣ್ಣ ಮೇಟಿ ಹೇಳಿದರು.


ಡಾಕ್ಟರ್ ಪುನೀತ್ ರಾಜಕುಮಾರ್ ರವರ ಮೊದಲನೆಯ ಪುಣ್ಯಸ್ಮರಣೆಯ ಅಂಗವಾಗಿ ಗೋವಾದ ವಾಸ್ಕೋ ಜುವಾರಿನಗರ ಪುನೀತ್ ಅಭಿಮಾನಿ ಬಳಗದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಿದ್ದಣ್ಣ ಮೇಟಿರವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡುತ್ತಿದ್ದರು.


ವೀರಶೈವ ಲಿಂಗಾಯಿತ ಸಮಾಜದ ರುದ್ರಯ್ಯ ಸ್ವಾಮಿ ಹಿರೇಮಠ, ಹಿರಿಯ ಕನ್ನಡಿಗರಾದ ಮಾದೇವಪ್ಪ ನಾಗೇಗೌಡ, ರಾಮನಗೌಡ ಕೊರ್ತಿ, ಉಮೇಶ್ ಲಿಂಗದಳ್ಳಿ, ಗುರುಪಾದಯ್ಯ ಹಿರೇಮಠ, ಯಂಕಪ್ಪ ರಾಥೋಡ್, ಗಣೇಶ್ ಲಮಾಣಿ, ಜುವಾರಿನಗರ ಕನ್ನಡ ಸಂಘದ ಅಧ್ಯಕ್ಷ ಶಿವಾನಂದ್ ಬಿಂಗಿ, ಸೇರಿದಂತೆ ವಿವಿಧ ಕನ್ನಡ ಸಂಘಟನೆಗಳ ಪ್ರಮುಖರು ಹಾಗೂ ಕನ್ನಡಿಗರು ಉಪಸ್ಥಿತರಿದ್ದು ಪುನೀತ್ ರಾಜಕುಮಾರ್ ರವರಿಗೆ ಗೌರವ ಸಲ್ಲಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ  ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top