ಆಳ್ವಾಸ್‌ ಪದವಿ ಪೂರ್ವ ಕಾಲೇಜು: ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Upayuktha
0

                                                         

ಮೂಡುಬಿದಿರೆ: ಬೆಳ್ತಂಗಡಿಯ ಪಡಂಗಡಿ  ಸರ್ಕಾರಿ ಉನ್ನತೀಕರಿಸಿದ ಪ್ರಾರ್ಥಮಿಕ ಶಾಲೆಯಲ್ಲಿ ಆಳ್ವಾಸ್‌ ಪದವಿ  ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ  ವಾರ್ಷಿಕ  ವಿಶೇಷ ಶಿಬಿರವು ನಡೆಯುತ್ತಿದ್ದು, ಒಂದು ವಾರಗಳ ಕಾಲ ನಡೆಯಲಿರುವ ಈ ಶಿಬಿರವನ್ನು ಕರ್ನಾಟಕ ಸರ್ಕಾರದ  ವಿಧಾನ ಪರಿಷತ್ತಿನ ಶಾಸಕ ಪ್ರತಾಪ್‌ ಸಿಂಹ ನಾಯಕ್‌ ಅವರು ಉದ್ಘಾಟಿಸಿದರು.

ಬಳಿಕ ಅವರು  ಮಾತನಾಡಿ , ತಾವು ವಿದ್ಯಾರ್ಥಿಯಾಗಿದ್ದಾಗ  ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕ ಹಾಗೂ ಶಿಬಿರಗಳ ಶಿಬಿರಾರ್ಥಿಯಾಗಿ ಭಾಗವಹಿಸಿದ ದಿನಗಳನ್ನು ನೆನಪಿಸಿಕೊಳ್ಳುತ್ತಾ, ಇಂತಹ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಗ್ರಾಮೀಣ ಪ್ರದೇಶದ ಜೀವನಾನುಭವ ಸಿಗಲಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೆ ಅವರವರ ಸಂಕಲ್ಪಗಳನ್ನು ಈಡೇರಿಸಲು ಶಿಬಿರವು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪಡಂಗಡಿ ಗ್ರಾಮ ಪಂಚಾಯತ್‌ ಸದಸ್ಯ ಸಂತೋಷ‌ ಕುಮಾರ್‌ ಜೈನ್, ಶಿಬಿರಕ್ಕೆ ಶುಭವನ್ನು ಹಾರೈಸಿ , ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ತಿಳಿಸಿದರು. ಆಳ್ವಾಸ್‌ ಪದವಿ ಪೂರ್ವ  ಕಾಲೇಜಿನ ಪ್ರಾಂಶುಪಾಲ ಪ್ರೊ. ಮಹಮ್ಮದ್‌ ಸದಾಕತ್‌ ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಪಡಂಗಡಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಮೀನಾಕ್ಷಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ಎಂ. ಇಸ್ಮಾಯಿಲ್‌ ಹಾಗೂ ಆಳ್ವಾಸ್‌ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಡೀನ್‌ ಪ್ರಶಾಂತ್‌ ಕುಮಾರ್‌ ಎಂ .ಡಿ ಉಪಸ್ಥಿತರಿದ್ದರು.

ಸಂಸ್ಕ್ರತ ವಿಭಾಗದ ಮುಖ್ಯಸ್ಥ ಅಂಬರೀಶ್‌  ಚಿಪ್ಲೂಣ್ಕರ್‌ ಕಾರ‍್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಕಾರ‍್ಯಕ್ರಮಾಧಿಕಾರಿ ಹಾಗೂ ಶಿಬಿರಾಧಿಕಾರಿ ಶಾತಿಟ್‌ ಮೋನಿಸ್‌ ಸ್ವಾಗತಿಸಿ, ಸಹ ಶಿಬಿರಾಧಿಕಾರಿ ಮೇಘನಾ ವಂದಿಸಿದರು.


Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top