ಮಂಗಳೂರು: ಅ.16ರಿಂದ ಜನಸ್ಪಂದನ ಕಾರ್ಯಕ್ರಮ

Upayuktha
0

ಮಂಗಳೂರು: ನಗರದ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಅವರ ನೇತೃತ್ವದಲ್ಲಿ ಅ.16 ರಿಂದ ಜನಸ್ಪಂದನ ಕಾರ್ಯಕ್ರಮ ನಡೆಯಲಿದ್ದು ಸರ್ಕಾರದ ವಿವಿಧ ಇಲಾಖೆಗಳ ವಿವಿಧ ಸೌಲಭ್ಯಗಳ ಮಾಹಿತಿ, ಫಲಾನುಭವಿಗಳಿಗೆ ಮಂಜುರಾತಿ ಪತ್ರ ವಿತರಣೆ ಹಾಗೂ ಇತರೆ ಕಾರ್ಯಕ್ರಮಗಳು ಬೆಳಗ್ಗೆ 9 ರಿಂದ ಸಂಜೆ 5.30ರವರೆಗೆ ನಡೆಯಲಿದೆ.


ಅ.16 ರಂದು ಪದವಿನಂಗಡಿಯ ಬೆನಕ ಹಾಲ್‍ನಲ್ಲಿ, ಅ.21ರಂದು ಕೈಕಂಬದ ಮಾತೃಭೂಮಿ ಸಭಾಭವನದಲ್ಲಿ, ಅ.28ರಂದು ಕಾವೂರಿನ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‍ನಲ್ಲಿ, ಅ.30 ರಂದು ಸುರತ್ಕಲ್‍ನ ಬಂಟರ ಭವನದಲ್ಲಿ ನವೆಂಬರ್ 6ರಂದು ಸುರತ್ಕಲ್‍ನ ಹಿಂದೂ ವಿದ್ಯಾದಾಯಿನಿ ಶಾಲೆಯಲ್ಲಿ ಹಾಗೂ ನವೆಂಬರ್ 7ರಂದು ಉಳಾಯಿಬೆಟ್ಟು ವಿಶಾಲ್ ಗಾರ್ಡನ್‍ನಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top