ವೃತ್ತಿಯನ್ನು ಪ್ರೀತಿಸಿ: ಡಾ।ಹರೀಶ್ಚಂದ್ರ

Upayuktha
0




ಉಡುಪಿ: ವೃತ್ತಿಯನ್ನು ಪ್ರೀತಿಸಿ, ನಿಷ್ಠೆಯಿಂದ ಮತ್ತು ಪ್ರಾಮಾಣಿಕತೆಯಿಂದ ತನ್ನನ್ನು ಸಮರ್ಪಿಸಿಕೊಂಡಾಗ ವೃತ್ತಿ ಗೌರವವೂ ಮತ್ತು ವ್ಯಕ್ತಿ ಗೌರವವೂ ಹೆಚ್ಚಾಗುತ್ತದೆ ಎಂದು ಗಾಂಧಿ ಆಸ್ಪತ್ರೆಯ ಎಮ್.ಡಿ ಡಾ। ಹರೀಶ್ಚಂದ್ರ ಅಭಿಪ್ರಾಯಪಟ್ಟರು.


ಅವರು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೆಶನ್ ಉಡುಪಿ ವಲಯ ಹಮ್ಮಿಕೊಂಡ ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಣೆ ಮತ್ತು ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.  


ಇನ್ನೋರ್ವ ಅತಿಥಿ  ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ ಮಾತನಾಡುತ್ತಾ ಪ್ರವಾಸೋದ್ಯಮಕ್ಕೂ ಛಾಯಾಚಿತ್ರಗ್ರಾಹಕರಿಗೂ ಅಮಿನಾಭಾವ ಸಂಬಂಧ. ಛಾಯಾಗ್ರಹಣದ ಮೂಲಕ ಪ್ರವಾಸೋಧ್ಯಮಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ ಎಂದರು.   


ಬದುಕು ಬಂಗಾರ ಎಂಬ ಕಿರು ಚಿತ್ರದ ಟ್ರೈಲರ್ ಬಿಡುಗಡೆಗೊಂಡಿತು. ಶ್ರೀಕೃಷ್ಣ ಜನ್ಮಾಷ್ಟಮಿಯಂದು ಉಡುಪಿಯಲ್ಲಿ ನಡೆದ ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಣೆ ನಡೆಯಿತು. ಶಿಕ್ಷಕಿಯರಾದ ಉಡುಪಿ ವಲಯದ ಜೀವಿತ ವಾಮನ್, ಪ್ರವೀಣ್ ಆನಂದ್, ನಯನ ಉದಯ್, ರಾಧಿಕಾ ದಿವಾಕರ್  ಹಾಗು ಕಾಪು ವಲಯದ ನಿಯತ ಸಚಿನ್, ಸವಿತಾ ಎಸ್ ಎರ್ಮಾಳ್, ಶಿಲ್ಪಾ ಶರಣ್ ರವರನ್ನು ಸನ್ಮಾನಿಸಲಾಯಿತು. 

       

ಈ ಸಂದರ್ಭದಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಮೂಡುಬಿದ್ರೆ ವಲಯಾಧ್ಯಕ್ಷ ಸುನಿಲ್ ಕೋಟ್ಯಾನ್, ಯು ಸುಧಾಕರ ಶೆಣೈ, ಉಡುಪಿ ಮಲಬಾರ್ ಗೋಲ್ಡ್  & ಡೈಮಂಡ್ ಮಾರುಕಟ್ಟೆ ಮುಖ್ಯಸ್ಥ ರಾಘವೇಂದ್ರ ನಾಯಕ್, ಪ್ರವೀಣ್ ಕೊರೆಯ ಉಪಸ್ಥಿತರಿದ್ದರು. ಉಡುಪಿ ವಲಯಾಧ್ಯಕ್ಷ ಜನಾರ್ದನ್ ಕೊಡವೂರು ಸ್ವಾಗತಿಸಿದರು. ರಾಘವೇಂದ್ರ ಶೇರಿಗಾರ್ ನಿರೂಪಿಸಿದರು. ದಿವಾಕರ್ ಕಟೀಲ್ ಪ್ರಾರ್ಥಿಸಿದರು. ಕೋಶಾಧಿಕಾರಿ ದಿವಾಕರ್ ಹಿರಿಯಡ್ಕ ವಂದಿಸಿದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top