ಮಂಗಳೂರು: ಕೇಂದ್ರ ಕಛೇರಿಯ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿ, ಮೇರಿಹಿಲ್, ಮಂಗಳೂರು ಇಲ್ಲಿ ಶ್ರೀ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮ ದಿನದ ಅಂಗವಾಗಿ‘ರಾಷ್ಟ್ರೀಯ ಏಕತಾ ದಿನ’ವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಚೂಂತಾರು, ಸರ್ದಾರ್ ವಲ್ಲಭಬಾಯ್ ಪಟೇಲ್ ಅವರು ಪಾಲಿಸಿದ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಕೇಂದ್ರ ಸರಕಾರ ಈ ಆಚರಣೆಯನ್ನು ಜಾರಿಗೆ ತಂದಿದೆ. ಸರ್ದಾರ್ ವಲ್ಲಭಬಾಯಿ ಪಟೇಲ್ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಜೀವವನ್ನೇ ತ್ಯಾಗಮಾಡಿದರು, 1875 ಅಕ್ಟೋಬರ್ 31ರಂದು ಹುಟ್ಟಿ 1950 ರಂದು ತಮ್ಮ 75ನೇ ವಯಸ್ಸಿನಲ್ಲಿ ಹೃದಯ ಸ್ತಂಭನದಿಂದ ಮರಣಗೊಂದಿರುತ್ತಾರೆ.
75 ವರ್ಷಗಳ ತುಂಬು ಜೀವನ ನಡೆಸಿ ದೇಶಕ್ಕಾಗಿ ಸರ್ವತ್ಯಾಗ ಮಾಡಿದಂತಹ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ನಮ್ಮ ದೇಶದ ಮೊದಲ ಗೃಹ ಸಚಿವರಾಗಿ ಮತ್ತು ದೇಶದ ಉಪ ಪ್ರಧಾನಿಯಾಗಿ ಕೆಲಸಮಾಡಿದರು ಅಂತಹ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ನಾವು ದಿನ ನಿತ್ಯ ಸ್ಮರಿಸಬೇಕು, ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ನುಡಿದರು.
ಈ ಸಂದರ್ಭದಲ್ಲಿ ಮಂಗಳೂರು ಘಟಕದ ಗೃಹರಕ್ಷಕ ಗೃಹರಕ್ಷಕಿಯರು ಪಥಸಂಚಲನ ಮಾಡಿದರು. ಉಪ ಸಮಾದೇಷ್ಟರಾದ ರಮೇಶ್ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಮಂಗಳೂರು ಘಟಕದ ಘಟಕಾಧಿಕಾರಿ ಮಾರ್ಕ್ ಶೇರಾ, ಹಿರಿಯ ಗೃಹರಕ್ಷಕರಾದ ಸುನೀಲ್, ಧನಂಜಯ್, ಕೇಶವ ಶೆಟ್ಟಿಗಾರ್, ರಾಜೇಶ್ ಗಟ್ಟಿ, ರೇವತಿ, ಭವಾನಿ, ಆಶಾ, ಭಾರತಿ, ಸುಲೋಚನಾ, ಶುಭ, ಉಷಾ, ನಿರೂಪಮ ಹಾಗೂ 50 ಮಂದಿ ಗೃಹರಕ್ಷಕ ಗೃಹರಕ್ಷಕಿಯರು ಉಪಸ್ಥಿತರಿದ್ದರು.