ಖ್ಯಾತ ಚತುರ್ಭಾಷಾ ಚಲನಚಿತ್ರ ನಟಿ ಶ್ರೀಮತಿ ಶೃತಿ, ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ

Upayuktha
0

ಬೆಳ್ತಂಗಡಿ: ಚತುರ್ಭಾಷಾ ಚಲನಚಿತ್ರ ನಟಿ ಶ್ರೀಮತಿ ಶೃತಿಯವರು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಛೇರಿ ಉಜಿರೆಗೆ ನವೆಂಬರ್.15 ರಂದು ಭೇಟಿ ನೀಡಿದರು.


ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಎನ್‌ ಜನಾರ್ಧನರವರು ಚಿತ್ರನಟಿ ಶೃತಿಯವರನ್ನು ಸ್ವಾಗತಿಸಿ, ಸಿರಿಸಂಸ್ಥೆಯ ಕಿರು ಪರಿಚಯವನ್ನು ಮಾಡಿ, ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು.


ಶ್ರೀಮತಿ ಶೃತಿಯವರು ಸನ್ಮಾನ ಸ್ವೀಕರಿಸಿ ಮಾತನಾಡಿ ಪೂಜ್ಯ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸಾಗಿರುವ ಈ ಸಿರಿ ಸಂಸ್ಥೆಯು ಇಲ್ಲಿ ದುಡಿಯುತ್ತಿರುವ ಪ್ರತಿಯೋರ್ವ ಮಹಿಳೆಗೂ ಸ್ವಾವಲಂಬನೆಯ ಬದುಕನ್ನು ನೀಡಿ, ಸುಖೀ ಜೀವನವನ್ನು ನಡೆಸಲು ಸ್ಪೂರ್ತಿಯಾಗಿದೆ. ಪ್ರತೀ ಯಶಸ್ವೀ ಪುರುಷನ ಹಿಂದೆ ಓರ್ವ ಮಹಿಳೆ ಇದ್ದಾಳೆ ಎಂಬ ಗಾದೆ ಮಾತು ಇಲ್ಲಿ ಸುಳ್ಳಾಗಿದೆ. ಯಾಕೆಂದರೆ ಸಿರಿ ಸಂಸ್ಥೆಯಲ್ಲಿ ದುಡಿಯುತ್ತಾ, ಸ್ವಾವಲಂಬನೆೆಯ ಬದುಕನ್ನು ಕಟ್ಟಿಕೊಂಡಂತಹ ಇಲ್ಲಿಯ ಎಲ್ಲಾ ಮಹಿಳೆಯರ ಹಿಂದೆ ಶಕ್ತಿಯಾಗಿ ಪೂಜ್ಯರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ನಿಂತಿದ್ದಾರೆ. ಸಿರಿ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ಪೂಜ್ಯ ದಂಪತಿಗಳ ಆಸರೆಯಲ್ಲಿ ಸಹಸ್ರಾರು ಮಹಿಳೆಯರ ಬಾಳು ಬೆಳಕಾಗಲಿ ಎಂದು ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿಸಿರಿ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರಾದ ಶ್ರೀ ರಾಜೇಶ್ ಪೈ, ‘ಕೊರಗಜ್ಜ’ ಚಲನಚಿತ್ರದ ನಿರ್ಮಾಪಕರಾದ ಶ್ರೀ ವಿಧ್ಯಾದರ್, ಸಿರಿ ಸಂಸ್ಥೆಯ ಆಡಳಿತ ಮತ್ತು ಲೆಕ್ಕಪತ್ರ ವಿಭಾಗದ ನಿರ್ದೇಶಕರಾದ ಪ್ರಸನ್ನ, ಎಸ್.ಕೆ.ಡಿ.ಆರ್.ಡಿ.ಪಿ ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ಹಾಗೂ ಸಿರಿ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಶ್ರೀಮತಿ ಶೃತಿಯವರನ್ನು ಅಭಿನಂದಿಸಿ ಗೌರವಾರ್ಪಣೆ ಸಲ್ಲಿಸಿದರು.


ಸಿರಿ ಸಿಬ್ಬಂದಿಗಳು ಶ್ರೀಮತಿ ಶೃತಿಯವರ ಬೇಟಿಯಿಂದ ಸಂಭ್ರಮಿಸಿದರು. ಜೀವನ್‌ ಕುಮಾರ್‌ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top