ದ.ಕ ಜಿಲ್ಲಾ ಗೃಹ ರಕ್ಷಕದಳದ ವತಿಯಿಂದ ಪರಿಸರ ಪ್ರೇಮಿ ಕೃಷ್ಣಪ್ಪ ಅವರಿಗೆ ಸನ್ಮಾನ

Upayuktha
0

ಕೃಷ್ಣಪ್ಪ ಅವರ ಪರಿಸರ ಸೇವೆ ಶ್ಲಾಘನೀಯ : ಡಾ|| ಚೂಂತಾರು


ಮಂಗಳೂರು: ದಿನಾಂಕ 08-11-2022ನೇ ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ 2022ನೇ ಇಸವಿಯ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಪರಿಸರ ಪ್ರೇಮಿ ಕೃಷ್ಣಪ್ಪ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ವತಿಯಿಂದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಶಾಲು ಹೊದಿಸಿ, ಫಲಪುಷ್ಟ ನೀಡಿ ಸನ್ಮಾನಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಇವರು ಕೃಷ್ಣಪ್ಪ ಅವರಿಗೆ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ನಮಗೆ ಸಂತಸ ತಂದಿದೆ, ಹಲವು ವರ್ಷಗಳಿಂದ ಗೃಹರಕ್ಷಕರೊಂದಿಗೆ ಗಿಡ ನೆಡುವ ಕಾರ್ಯಕ್ರಮದಲ್ಲಿ ಕೈಜೋಡಿಸುತ್ತಿದ್ದಾರೆ, ನೂರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಸಮಾಜಕ್ಕೆ ಮಾದರಿಯಾಗಿದ್ದಾರೆ. ಮಕ್ಕಳಲ್ಲಿ ಮತ್ತು ಯುವಕರಲ್ಲಿ ಪರಿಸರ ಪ್ರಜ್ಞೆ ಮೂಡಿಸುವಲ್ಲಿ ಕೃಷ್ಣಪ್ಪ ಅವರ ನಿರಂತರವಾಗಿ ಎಲೆ ಮರೆಯ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ. ಎಂಬತ್ತರ ವಯಸ್ಸಿನಲ್ಲೂ ಯುವಕರನ್ನು ನಾಚಿಸುವಂತೆ ಸಮಾಜ ಸೇವೆ ಮಾಡುತ್ತಿದ್ದಾರೆ ಇವರ ಈ ಸೇವೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ಶ್ಲಾಘನೀಯ ಎಂದು ಸಮಾದೇಷ್ಟರು ನುಡಿದರು.


ಈ ಸಂದರ್ಭದಲ್ಲಿ ಕಛೇರಿಯ ಅಧೀಕ್ಷಕಾದ ಶ್ರೀ ರತ್ನಾಕರ, ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಅನಿತಾ ಟಿ.ಎಸ್, ದಲಾಯತ್ ಮೀನಾಕ್ಷಿ, ಶ್ರೀ ರಾಮಚಂದ್ರ ಭಟ್ ಮಾಜಿ ಯೋಧ, ಬೋಜ ಬಂಟ್ವಾಳ ಘಟಕದ ಮಾಜಿ ಘಟಕಾಧಿಕಾರಿ, ಗೃಹರಕ್ಷಕರಾದ ದಿವಾಕರ್, ಪುರುಷೋತ್ತಮ್, ಸುಲೋಚನಾ, ಜಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top