ವ್ಯಕ್ತಿ ಪರಿಪೂರ್ಣನಾಗಲು ನಿರಂತರ ಅಭ್ಯಾಸ, ಏಕಾಗ್ರತೆ ಮತ್ತು ಪ್ರಯತ್ನ ಅಗತ್ಯ: ರವಿಶಂಕರ್ ವಿ.ಎಸ್

Chandrashekhara Kulamarva
0

ಪುತ್ತೂರು: ವ್ಯಕ್ತಿಯೊಬ್ಬ ಯಾವುದೇ ವಿಷಯದಲ್ಲಿ ಪರಿಪೂರ್ಣನಾಗಬೇಕಾದರೆ ನಿರಂತರ ಅಭ್ಯಾಸ ಅಗತ್ಯ. ಏಕಾಗ್ರತೆಯಿಂದ ಕೂಡಿದ ಪ್ರಯತ್ನದಿಂದ ಮಾತ್ರ ಯಶಸ್ಸು ಸಿದ್ದಿಸುತ್ತದೆ ಎಂದು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ.ಎಸ್ ಹೇಳಿದರು.


ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಸ್ಪರ್ಧೆಯಲ್ಲಿ ಎಲ್ಲರೂ ಗೆಲ್ಲುವುದು ಸಾಧ್ಯವಿಲ್ಲ ಹಾಗಾಗಿ ಆಟವನ್ನು ಕ್ರೀಡಾಸ್ಪೂರ್ತಿಯಿಂದ ಆಡಬೇಕು ಮತ್ತು ಅಲ್ಲಿನ ಕಹಿ ಘಟನೆಗಳನ್ನು ಕ್ರೀಡಾಂಗಣದಿಂದ ಹೊರ ಹೋಗುವಾಗ ಮರೆತು ಬಿಡಬೇಕು ಎಂದು ಹೇಳಿದರು.


ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್. ಶೆಣೈ ಮಾತನಾಡಿ ಹವ್ಯಾಸಗಳು ನಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತವೆ. ದೈನಂದಿನ ಜಂಜಾಟಗಳಿಂದ ಹೊರ ಬರಲು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಇದು ಶಾರೀರಿಕ ದೃಡತೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದರು. ವಿದ್ಯಾರ್ಥಿಗಳ ಪ್ರತಿಭೆಗೆ ತಕ್ಕ ಪ್ರೋತ್ಸಾಹವನ್ನು ನೀಡುವ ಕೆಲಸವನ್ನು ನಮ್ಮ ಸಂಸ್ಥೆಯು ನಿರಂತರವಾಗಿ ಮಾಡುತ್ತಿದೆ ಎಂದು ನುಡಿದರು.


ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ 18 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿವೆ.


ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಸ್ವಾಗತಿಸಿ. ಎಂಸಿಎ ವಿಭಾಗದ ನಿರ್ದೇಶಕಿ ಡಾ. ವಂದನಾ ಬಿ.ಎಸ್ ವಂದಿಸಿದರು. ಭಾವನಾ. ಎಂ.ಆರ್ ಕಾರ್ಯಕ್ರಮ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top