ಕಮರ್ಷಿಯಲ್ ಕೋಲ್ ಬ್ಲಾಕ್ಸ್ ಹರಾಜಿನಿಂದ ಕಲ್ಲಿದ್ದಲು ಕೊರತೆ ನಿವಾರಣೆ

Upayuktha
0
ಪ್ರಹ್ಲಾದ್ ಜೋಶಿ ಕಾರ್ಯ ಶ್ಲಾಘಿಸಿದ ನಿರ್ಮಲಾ ಸೀತಾರಾಮನ್

ದೆಹಲಿ: ಕೇಂದ್ರ ಸರ್ಕಾರ ಇಂದು 6ನೇ ಹಂತದ ಕಲ್ಲಿದ್ದಲು ಹರಾಜು ಪ್ರಕ್ರಿಯೆ ಪ್ರಾರಂಭಿಸಿದ್ದು, ಕಲ್ಲಿದ್ದಲು ಗಣಿಗಾರಿಕೆ ಕ್ಷೇತ್ರವನ್ನ ಖಾಸಗಿ ಕ್ಷೇತ್ರಕ್ಕೆ ಅನ್ ಲಾಕ್ ಮಾಡುವ ಈ ನಿರ್ಧಾರ ಒಂದು ಮೈಲಿಗಲ್ಲು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಲ್ಹಾದ್ ಜೋಶಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.


ದೆಹಲಿಯಲ್ಲಿಂದು ಒಟ್ಟು 141 ಕಮರ್ಷಿಯಲ್ ಕಲ್ಲಿದ್ದಲು ಬ್ಲಾಕ್ಸ್ ಗಳ ಹರಾಜು ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಸಾಥ್ ನೀಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಮರ್ಷಿಯಲ್ ಕಲ್ಲಿದ್ದಲು ಹರಾಜು ಲಾಂಚ್ ಮಾಡಿದರು. 6 ನೇ ಹಂತದ 133 ಬ್ಲಾಕ್ಸ್ ಹಾಗೂ 5 ನೇ ಹಂತದ ಸೆಕೆಂಡ್ ಅಟೆಮ್ಟ್ ನ 8 ಬ್ಲಾಕ್ಸ್ ಗಳನ್ನ ಖಾಸಗಿ ವಲಯಕ್ಕೆ ಹರಾಜಿಗಿಡಲಾಯಿತು. ಇಂದು ಒಟ್ಟು 67 ಕಮರ್ಷಿಯಲ್ ಕಲ್ಲಿದ್ದಲು ಬ್ಲಾಕ್ಸ್ ಗಳ ಹರಾಜಾಗಿವೆ ಎಂದು ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.


ಈ ವೇಳೆ ಮಾತನಾಡಿದ ಪ್ರಲ್ಹಾದ್ ಜೋಶಿಯವರು, ಕಮರ್ಷಿಯಲ್ ಕಲ್ಲಿದ್ದಲು ಹರಾಜಿನಿಂದ ಪ್ರಸಕ್ತ ಸಾಲಿನಲ್ಲಿ ಖಾಸಗಿ ವಲಯದಿಂದ 5 ಮಿಲಿಯನ್ ಮೆಟ್ರಿಕ್ ಟನ್ ನಷ್ಟು ಕಲ್ಲಿದ್ದಲು ಉತ್ಪಾದನೆಯಾಗಲಿದೆ ಎಂದರು. ಅಲ್ಲದೇ ಮುಂದಿನ ಸಾಲಿನಲ್ಲಿ 10 ರಿಂದ 15 ಮಿಲಿಯನ್ ಮೆಟ್ರಿಕ್ ಟನ್ ನಷ್ಟು ಕಮರ್ಷಿಯಲ್ ಕಲ್ಲಿದ್ದಲು ಉತ್ಪಾದನೆಯಾಗುವ ನಿರೀಕ್ಷೆಯಿದೆ. ನಮಗೆ 12 ಮಿಲಿಯನ್ ಮೆಟ್ರಿಕ್ ಟನ್ ಕಲ್ಲಿದ್ದಲು ಕೊರತೆಯಿತ್ತು. ಇದೀಗ ಕಮರ್ಷಿಯಲ್ ಕಲ್ಲಿದ್ದಲು ಬ್ಲಾಕ್ಸ್ ಗಳಿಂದ ಈ ಕೊರತೆ ನಿವಾರಣೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೋಲ್ ಗ್ಯಾಸಿಫಿಕೇಶನ್ ಪ್ರಾಜೆಕ್ಟ್ ಗೆ ಹಣಕಾಸು ಸಚಿವಾಲಯ 60 ಸಾವಿರ ಕೋಟಿ ಅನುದಾನ ಮೀಸಲಿರಿಸಿದ್ದಕ್ಕೆ ಪ್ರಲ್ಹಾದ್ ಜೋಶಿ ಇದೇ ವೇಳೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ ಸಲ್ಲಿಸಿದರು.


ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕಮರ್ಷಿಯಲ್ ಕಲ್ಲಿದ್ದಲು ಬ್ಲಾಕ್ಸ್ ಹರಾಜು ಪ್ರಕ್ರಿಯೆ ವೇಗವಾಗಿ ನೆರವೇರಿಸುವಲ್ಲಿ ಪ್ರಲ್ಹಾದ್ ಜೋಶಿ ಅವರ ಕಾರ್ಯ ಶ್ಲಾಘನೀಯ ಎಂದರು. ಭಾರತ ಅತಿ ಹೆಚ್ಚು ಕಲ್ಲಿದ್ದಲು ಹೊಂದಿದ್ದರೂ, ಹಿಂದಿನ ಸರ್ಕಾರಗಳ ನೀತಿಯಿಂದ ನಮ್ಮ ಸಾಮರ್ಥ್ಯಕ್ಕೆ ತಕ್ಕ ಕಲ್ಲಿದ್ದಲು ಉತ್ಪಾದನೆ ಆಗುತ್ತಿರಲಿಲ್ಲ. ಆದರೆ ಕಮರ್ಷಿಯಲ್ ಕಲ್ಲಿದ್ದಲು ಹರಾಜಿನ ಮೂಲಕ ಕೋಲ್ ಪ್ರೊಡಕ್ಷನ್ ಹೆಚ್ಚಿಸುವತ್ತ ಪ್ರಲ್ಹಾದ್ ಜೋಶಿ ಹೆಜ್ಜೆಯಿಟ್ಟಿದ್ದಾರೆ.


ಯುಪಿಎ-2 ಸರ್ಕಾರವಿದ್ದಾಗ ಸಿಎಜಿಆರ್ ನಲ್ಲಿ ಕಲ್ಲಿದ್ದಲು ಆಮದು ಶೇ 23% ರಷ್ಟಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಬಂದ ಬಳಿಕ ಪ್ರಸ್ತುತ ಸಿಎಜಿಆರ್ ನಲ್ಲಿ ಕಲ್ಲಿದ್ದಲು ಆಮದು ಶೇ 2% ಕ್ಕೆಇಳಿಸಲಾಗಿದೆ. ಇದರಲ್ಲಿ ಪ್ರಲ್ಹಾದ್ ಜೋಶಿ ಹಾಗೂ ಕಲ್ಲಿದ್ದಲು ಸಚಿವಾಲಯ ಸಾಕಷ್ಟು ಶ್ರಮವಹಿಸಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತ ಹೊರದೇಶಗಳಿಗೆ ರಫ್ತು ಮಾಡುವಷ್ಟು ಕಲ್ಲಿದ್ದಲು ಹೊಂದಿದ್ದರೂ, ಹಿಂದಿನ ಸರ್ಕಾರಗಳ ನೀತಿಯಿಂದ ಆಮದು ಮಾಡಿಕೊಳ್ಳುವ ಪರಿಸ್ಥಿತಿಗೆ ತಂದಿಟ್ಟಿದ್ದಾರೆ. ಕಲ್ಲಿದ್ದಲು ಕ್ಷೇತ್ರವನ್ನ ಖಾಸಗಿ ಕ್ಷೇತ್ರಕ್ಕೆ ಅನ್ ಲಾಕ್ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಮಾರ್ಗದರ್ಶನ ಮಾಡಿದರು ಎಂದು ಅವರು ಹೇಳಿದರು.


ಕಮರ್ಷಿಯಲ್ ಕಲ್ಲಿದ್ದಲು ಹರಾಜಿನಿಂದ ದೇಶದ 11 ರಾಜ್ಯಗಳಿಗೆ ಹೆಚ್ಚಿನ ಲಾಭ ದೊರೆಯಲಿದೆ. ಕಲ್ಲಿದ್ದಲು ಉತ್ಪಾದನೆ ಹೆಚ್ಚಿಸುವುದರ ಜೊತೆಗೆ ವಿಶೇಷವಾಗಿ ಕಲ್ಲಿದ್ದಲು ಗ್ಯಾಸಿಫಿಕೇಶನ್ ನತ್ತ ಹೆಚ್ಚಿನ ಗಮನ ಹರಿಸಬೇಕಾಗಿದೆ. ಕಲ್ಲಿದ್ದಲಿನಿಂದ ಗ್ಯಾಸ್ ತಯಾರಿಕೆಯನ್ನ ಭಾರತ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕಲ್ಲಿದ್ದಲು ಸಚಿವಾಲಯ ಮಹತ್ವದ ಹೆಜ್ಜೆಯಿಟ್ಟಿದೆ ಎಂದು ನಿರ್ಮಲಾ ಸೀತಾರಾಮನ್ ಅಭಿಪ್ರಾಯ ವ್ಯಕ್ತಪಡಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top