ಸುದಾನ: ದಿನಾಂಕ ನ.26 ರಂದು ಸುದಾನ ಶಾಲೆಯಲ್ಲಿ ಸಂವಿಧಾನ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೊಹಮ್ಮದ್ ಫಾಲಿಲ್ (10ನೇ) ದಿನದ ಮಹತ್ವವನ್ನು ತಿಳಿಸಿದರು. ಶಾಲಾ ನಾಯಕ ಸನ್ವರ್ಯ ಗೌಡ (10ನೇ) ಪ್ರತಿಜ್ಞಾ ಸ್ವೀಕಾರವನ್ನು ನಡೆಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ. ಶೋಭಾ ನಾಗರಾಜ್ ಭಾರತ ಸಂವಿಧಾನದ ಪ್ರಸ್ತಾವನೆ ಹಾಗೂ ಡಾ. ಬಿ. ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿದರು.
ಇದರ ಅಂಗವಾಗಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆಯನ್ನು ನಡೆಸಲಾಯಿತು. ಶಾಲಾ ಸೋಶಿಯಲ್ ಸಂಘ “ಜಾಗೃತಿ” ಯು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ