ಪುತ್ತೂರಿನ 'ಒಳಿತು ಮಾಡು ಮನುಷ್ಯ' ತಂಡದ 19ನೇ ಕಾರ್ಯಕ್ರಮ

Upayuktha
0

ಪುತ್ತೂರು: ಇಲ್ಲಿನ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಸಕ್ಷಮ ಪುತ್ತೂರು ಘಟಕದ ಸಹಯೋಗದೊಂದಿಗೆ ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 19ನೇ ಯೋಜನೆ 'ಒಳಿತು ಮಾಡು ಮನುಷ' ಕಾರ್ಯಕ್ರಮವು ಡಿಸೆಂಬರ್ 30ರಂದು ಪುತ್ತೂರಿನ "ಅನುರಾಗ ವಠಾರ"ದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬೆಟ್ಟಂಪಾಡಿ ನವೋದಯ ಪ್ರೌಡ ಶಾಲೆಯ ಮುಖ್ಯೋಪಾಧ್ಯಾಯ ಶರತ್ ಕುಮಾರ್ ಮಾತನಾಡಿ, ಸೇವೆ ಎಂಬ ಯಜ್ಞದಲ್ಲಿ ಸಮಿತೆಯಂತೆ ಉರಿಯಬೇಕು ಎಂದು ಹಿರಿಯರು ತಿಳಿಸಿಕೊಟ್ಟಿದ್ದಾರೆ. ಜನರು ಸೇವೆ ಮಾಡುವ ಮೂಲಕ ಒಳಿತು ಮಾಡು ಮಾನುಷ ಸಹಾಯ ಸೇವಾ ನಿಧಿ ಟ್ರಸ್ಟ್ ಇದೆ ಕಾರ್ಯವನ್ನು ಮಾಡುತ್ತಿದೆ. ಯಾವುದೇ ಸಂಘಟನೆಗಳ ಸಹಯೋಗ ಇಲ್ಲದೆ,ಸೇವೆ ಮಾಡುತ್ತಿದೆ. ಇನಷ್ಟು ಉತ್ತಮ ಕಾರ್ಯಗಳನ್ನು ಮಾಡುವಂತಾಗಲಿ ಎಂದು ಶುಭಹಾರೈಸಿದರು.


ಇನೋರ್ವ ಮುಖ್ಯ ಅತಿಥಿ ನಗರಸಭೆ ಮಾಜಿ ಅಧ್ಯಕ್ಷ ಲೋಕೇಶ್ ಹೆಗ್ಡೆ ಮಾತನಾಡಿ, ಬಲಗೈಯಲ್ಲಿ ಕೊಟ್ಟದ್ದು ಎಡಕೈಗೆ ಗೊತ್ತಾಗಬಾರದು ಎಂದು ಹೇಳುತ್ತಾರೆ, ಪ್ರಚಾರವಿಲ್ಲದೆ ಮಾಡುವ ಕಾರ್ಯಕ್ರಮಗಳಿಂದ ಸಮಾಜ ಕಲ್ಯಾಣ ಆಗಲು ಪೂರಕ. ಇಂತಹ ಕಾರ್ಯಕ್ರಮ ದೇವರು ಮೆಚ್ಚುವ ಕಾರ್ಯ ಎಂದರು.


ಕಾರ್ಯ್ರಮದಲ್ಲಿ 56,000 ಸಾವಿರ ಮೊತ್ತದ 56 ಆಹಾರ ಕಿಟ್ ವಿತರಣೆ ಮಾಡಲಾಯಿತು. ಹಾಗೂ 60 ಜನರಿಗೆ ಬಿಪಿ, ಸುಗರ್ ತಪಾಸಣೆ ಮಾಡಲಾಯ್ತು.


ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಗಳದ ಕಲಾವಿದ ಕೃಷ್ಣಪ್ಪ ಶಿವಾನಗರ, jc ಚೇತನ್ ಕುಮಾರ್ ಪುತ್ತೂರು, ಶ್ರೀಮತಿ ಶೋಭಾ ಮಡಿವಾಳ, ಹಾಗೂ ಯೋಜನಾಧಿಕರಿ ಕುಮಾರಿ ಸೌಜನ್ಯ ಆರ್ಲಪದವು ಹಾಜರಿದ್ದರು.


ಪ್ರಾರ್ಥನೆಯನ್ನು ಮಾಲಿನಿ, ಹರ್ಷಿತಾ, ಮಮತಾ, ಸ್ವಾಗತವನ್ನು ಶೀಲಾ, ಧನ್ಯವಾದವನ್ನು ಶೃತಿಕಾ ಹಾಗೂ ಶ್ರೀಮತಿ ಶುಭ ಕಾರ್ಯಕ್ರಮವನ್ನು ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top