ಪುತ್ತೂರು: ಇಲ್ಲಿನ ಪ್ರಸಿದ್ಧ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಸಂಸ್ಥಾಪಕರ ದಿನಾಚರಣೆಯನ್ನು ಡಿಸೆಂಬರ್ 7ರಂದು ಆಚರಿಸಲಾಯಿತು. ಸಂಸ್ಥೆಯ ಚೇರ್ಮೇನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಕೇಶವಪ್ರಸಾದ್ ಮುಳಿಯರವರು ದೀಪ ಬೆಳಗಿಸಿ ಮಾತನಾಡಿ ಸಂಸ್ಥೆಯು ಸ್ಥಾಪಕರ ದಿನಾಚರಣೆ ಪ್ರಯುಕ್ತ ಡಿಸೆಂಬರ್ 7, 8, 9ರಂದು ಗ್ರಾಹಕರು ನಮ್ಮಲ್ಲಿ ಖರೀದಿಸಿದ ಪ್ರತೀ ಗ್ರಾಂನಲ್ಲಿ ರೂ.50ನ್ನು ಸಾಮಾಜಿಕ ಉದ್ದೇಶಗಳಿಗಾಗಿ ವಿನಿಯೋಗಿಸಲಾಗಿದೆ.
78 ವರ್ಷಗಳ ಸಂಭ್ರಮದಲ್ಲಿರುವ ನಮ್ಮ ಸಂಸ್ಥೆಗೆ ಗ್ರಾಹಕರ ಸೇವೆ ಹಾಗೂ ಸಂತೃಪ್ತಿಯೇ ನಮ್ಮ ಮುಖ್ಯ ಧ್ಯೇಯ. ಇದಲ್ಲದೆ, ನಮ್ಮ ಸಂಸ್ಥೆಯಿಂದ ಹಲವಾರು ಸಾಮಾಜಿಕ ಕಾರ್ಯಗಳು ನಡೆಯುತ್ತಿದೆ ಈ ಸಂದರ್ಭದಲ್ಲಿ ನಮ್ಮನ್ನು ಪ್ರೋತ್ಸಾಹಿಸಿದ ಗ್ರಾಹಕರಿಗೆ ಹೃದಯಾಂತರಾಳದ ನಮನಗಳು ಎಂದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ