ನಾವು ಬಳಕೆ ಮಾಡಬೇಕಾಗಿರುವ ಸಂಸ್ಕೃತ ತುಂಬಾ ಸರಳವಾಗಿರಬೇಕು. ಅದು ವ್ಯಾಕರಣ ಶುದ್ಧವಾಗಿರಬೇಕು ಎಂಬ ತತ್ವವನ್ನು ಮುಖ್ಯವಾಗಿ ತಿಳಿಸುವ ಈ ವರದಿಯನ್ನು ಮೊದಲು ಸಂಸ್ಕೃತ ಬಲ್ಲವರ ನಡುವೆ ಪ್ರಚಾರಪಡಿಸಬೇಕಾದ ಅಗತ್ಯವಿದೆ. ಅದಕ್ಕೆಂದೇ ದಿನಾಂಕ ೦೯.೧೨.೨೦೨೨ ರಂದು ಮಂಗಳೂರಿನ ಗಣಪತಿ ಹೈಸ್ಕೂಲ್ ರಸ್ತೆಯಲ್ಲಿರುವ ಸಾಫ್ರೋನ್ ಹೊಟೇಲ್ನಲ್ಲಿ "ಸರಳ ಮಾನಕ ಸಂಸ್ಕೃತ" ಎಂಬ ಶೀರ್ಷಿಕೆಯಡಿ ಒಂದು ದಿನದ ಕಾರ್ಯಾಗಾರವೊಂದನ್ನು ಏರ್ಪಡಿಸಲಾಗಿದೆ. ಶ್ರೀನಿವಾಸ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನಡೆಯಲಿರುವ ಈ ಕಾರ್ಯಾಗಾರವನ್ನು ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ. ಸಿಎ ಎ. ರಾಘವೇಂದ್ರ ರಾವ್ ಅವರು ಉದ್ಘಾಟಿಸಲಿದ್ದಾರೆ. ಸಂಸ್ಕೃತ ಭಾರತಿಯ ಅಖಿಲ ಭಾರತ ಪ್ರಶಿಕ್ಷಣ ಪ್ರಮುಖರಾದ ಡಾ. ಹೆಚ್. ಆರ್. ವಿಶ್ವಾಸ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಶೃಂಗೇರಿಯ ರಾಜೀವ ಗಾಂಧಿ ಪರಿಸರದ ಹಿರಿಯ ಪ್ರಾಧ್ಯಾಪಕರಾದ ಶ್ರೀ ವೆಂಕಟೇಶ ಮೂರ್ತಿ, ಸಂಸ್ಕೃತ ಭಾರತಿಯ ಅಖಿಲ ಭಾರತೀಯ ಕಾರ್ಯದರ್ಶಿ ಡಾ. ನಂದಕುಮಾರ್ ಅವರೂ ಇದರಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲೆಯ ಎಲ್ಲ ಸಂಸ್ಕೃತ ಶಿಕ್ಷಕರೂ, ಪ್ರೌಢ ಶಾಲಾ ವಿದ್ಯಾರ್ಥಿಗಳೂ ಇದರಲ್ಲಿ ಭಾಗವಹಿಸಿ ಲಾಭಾನ್ವಿತರಾಗಬೇಕೆಂದು ನಿವೇದಿಸಲಾಗಿದೆ.
ಶ್ರೀನಿವಾಸ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ಪಿ. ಎಸ್. ಐತಾಳ್, ಕುಲ ಸಚಿವರಾದ ಡಾ. ಅನಿಲ್ ಕುಮಾರ್, ಅಭಿವೃದ್ಧಿ ಕುಲಸಚಿವರಾದ ಡಾ. ಅಜಯ್ ಕುಮಾರ್, ಸಂಸ್ಕೃತ ಭಾರತಿ ಮಂಗಳೂರು ಇದರ ಕಾರ್ಯದರ್ಶಿಗಳಾದ ಶ್ರೀ ಸತ್ಯನಾರಾಯಣ, ಹಾಗೂ ಕಾರ್ಯಾಗಾರದ ಸಂಯೋಜಕರಾದ ಡಾ. ಶಾಂತಲಾ ವಿಶ್ವಾಸ ಇವರುಗಳು ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.