ಯುವಜನತೆಯಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ

Upayuktha
0


ಪುತ್ತೂರು:  ಆಧುನಿಕ ಯುಗದಲ್ಲಿ ಯುವಜನತೆ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಕೆಲವೊಮ್ಮೆ ವಿಫಲರಾಗುತ್ತಾರೆ. ಕಷ್ಟಗಳು ಎದುರಾದಾಗ ಅದನ್ನು ಹಿಮ್ಮೆಟ್ಟಿ ಮುಂದುವರಿಯಬೇಕು. ಇತ್ತೀಚಿನ ದಿನಗಳಲ್ಲಿ ಯುವಜನತೆ ಬಹಿರಂಗವಾಗಿ ಗೆದ್ದರೂ ಅಂತರಂಗದಲ್ಲಿ ಸೋಲುತ್ತಾರೆ. ಯಾವುದೇ ಸಂದರ್ಭದಲ್ಲೂ  ಹಿಂಜರಿಯದೆ ಸದೃಢತೆಯಿಂದ, ಆತ್ಮಸ್ಥೈರ್ಯದಿಂದ ಮುನ್ನುಗ್ಗಬೇಕು ಎಂದು ಕುಕ್ಕೆ ಸುಬ್ರಹ್ಮಣ್ಯ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕಿ ಆರತಿ ಹೇಳಿದರು.

ಇವರು ಪುತ್ತೂರು ವಿವೇಕಾನಂದ (ಸ್ವಾಯತ್ತ) ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗ ಹಾಗೂ ಕಾಲೇಜಿನ ಮಹಿಳಾ ಕೋಶ, ಐಕ್ಯೂಎಸಿ ಜಂಟಿ‌ ಆಶ್ರಯದಲ್ಲಿ ನಡೆದ "ಆಧುನಿಕ ಸಮಾಜದಲ್ಲಿ ಯುವಜನತೆಗಿರುವ ಸವಾಲುಗಳು" ಎನ್ನುವ ವಿಚಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. 

ಬದಲಾವಣೆ ಮೊದಲು ನಮ್ಮಿಂದ ಆರಂಭವಾಗಬೇಕು. ಯುವಜನತೆಯಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ರಾಷ್ಟ್ರ ನಮ್ಮನ್ನು ಕಟ್ಟುವುದಲ್ಲ ನಾವು ರಾಷ್ಟ್ರವನ್ನು ಕಟ್ಟಬೇಕು. ಸವಾಲುಗಳನ್ನು ಎದುರಿಸಲು ಹಿಂಜರಿದು ಆತ್ಮಹತ್ಯೆಯಂತಹ ಕೆಟ್ಟ ನಿರ್ಧಾರಗಳನ್ನು ಕೈಗೊಳ್ಳಬಾರದು. ಸಮಸ್ಯೆಯನ್ನು ಎದುರಿಸುವ ಶಕ್ತಿ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಹಿರಿಯರ ಸಲಹೆಗಳನ್ನು ಪಡೆದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಮಾತನಾಡಿ, ಯುವಜನರು ಯಾವತ್ತೂ ಸಂಕುಚಿತರಾಗಬಾರದು. ಬದಲಾಗಿ ಗಟ್ಟಿತನವನ್ನು ಬೆಳೆಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು. ಯಾವುದೇ ಘಟನೆಯಾದರೂ ಧೈರ್ಯದಿಂದ ಎದುರಿಸಬೇಕು ಎಂದು ಸಲಹೆ ನೀಡಿದರು.

ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ.ಎಸ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ದೇವಯಾನಿ ಸ್ವಾಗತಿಸಿ, ಉಜ್ವಲ್ ವಂದಿಸಿದರು. ದಿವ್ಯ ಕಾರ್ಯಕ್ರಮ ನಿರೂಪಿಸಿದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top