ತೆಂಕನಿಡಿಯೂರು ಕಾಲೇಜು: ಕೌಶಲ್ಯ ತರಬೇತಿ ಕಾರ್ಯಕ್ರಮ

Upayuktha
0

ತೆಂಕನಿಡಿಯೂರು: ದಿನಾಂಕ 17-12-2022 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಉದ್ಯೋಗ ಮಾಹಿತಿ ಘಟಕ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ಒಂದು ದಿನದ ಕೌಶಲ್ಯ ತರಬೇತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಟಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್‌ ರೈ ಕೆ. ಅವರು ವಿದ್ಯಾರ್ಥಿಗಳು ತಮ್ಮ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಳ್ಳುವ ಮೂಲಕ ಉತ್ತಮ ಉದ್ಯೋಗವನ್ನು ಪಡೆದುಕೊಳ್ಳಲು ಸಾಧ್ಯ ಎಂದು ಸಲಹೆ ನೀಡಿದರು.


ವಿದ್ಯಾರ್ಥಿಗಳು ಹೊಸಕಾಲದ ಕಂಪನಿಗಳಿಗೆ ಅಗತ್ಯವಾದ ಹೊಸ ಕೌಶಲ್ಯಗಳನ್ನು ಕರಗತ ಮಾಡಿಕೊಂಡು ಬೆಳವಣಿಗೆ ಸಾಧಿಸಬೇಕೆಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೌಶಲ್ಯ ತರಬೇತುದಾರರಾದ ಶ್ರೀ ನವೀನ್ ಕುಮಾರ್‌ಅವರು ಸ್ವವಿವರ ಬರೆಯುವ ಬಗ್ಗೆ, ಸಂದರ್ಶನ ಎದುರಿಸುವ ಬಗ್ಗೆ ಮತ್ತು ಗುಂಪು ಚರ್ಚೆಯ ಬಗ್ಗೆ ಸುದೀರ್ಘವಾಗಿ ಅಂತಿಮ ವರ್ಷದ ಎಲ್ಲ ಪದವಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ತರಬೇತಿ ನೀಡಿದರು. ಇದು ಸ್ಪರ್ಧಾತ್ಮಕಯುಗ, ಈ ಯುಗದಲ್ಲಿ ಬದುಕಬೇಕಾದರೆ ವಿದ್ಯಾರ್ಥಿಗಳು ಕೌಶಲ್ಯಗಳನ್ನು ಕಲಿತು ಅದನ್ನು ಉದ್ಯೋಗ ಮತ್ತು ಬದುಕಿನಲ್ಲಿ ಅಳವಡಿಸಿಕೊಂಡರೆ ಮುಂದೆ ಬರಬಹುದೆಂದು ಸಲಹೆ ನೀಡಿದರು.


ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ ಉಪಸ್ಥಿತರಿದ್ದರು. ಉದ್ಯೋಗ ಮಾಹಿತಿಘಟಕದ ಸಂಚಾಲಕರಾದ ಶ್ರೀ ಉಮೇಶ್ ಪೈ ಅತಿಥಿಗಳನ್ನು ಸ್ವಾಗತಿಸಿದರೆ, ಡಾ. ಎಚ್.ಕೆ. ವೆಂಟೇಶ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top