ಯುರೋಪಿಯನ್ ಒಕ್ಕೂಟದೊಂದಿಗಿನ ಸಂಬಂಧದಿಂದ ಭಾರತಕ್ಕೆಲಾಭ
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಡಾ. ಶಿವರಾಮ ಕಾರಂತ ಸಭಾಭವನದಲ್ಲಿ ಬುಧವಾರ ರಾಜ್ಯಶಾಸ್ತ್ರ, ಸಮಾಜಶಾಸ್ತ್ರ ಹಾಗೂ ಪತ್ರಿಕೋದ್ಯಮ ವಿಭಾಗಗಳ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸದಲ್ಲಿ ʼಯುರೋಪಿಯನ್ ಒಕ್ಕೂಟ ಹಾಗೂ ಸಾರ್ಕ್ʼ ಎಂಬ ವಿಷಯದ ಕುರಿತು ಮಾತನಾಡಿದ ಅವರು, ಅವರು ಹವಾಮಾನ ವೈಪರೀತ್ಯ ವಿಚಾರ ತಡೆಯಲು ಒಟ್ಟಾಗಿ ಶ್ರಮಿಸಬೇಕಿದೆ, ಎಂದರು.
ಸಾರ್ಕ್ ಮತ್ತು ಯುರೋಪಿಯನ್ ಒಕ್ಕೂಟಗಳ ನಡುವಿನ ಸಂಬಂಧ ಸುಧಾರಣೆ ನಿಧಾನವಾಗಿದ್ದರೂ ಆಶಾದಾಯಕವಾಗಿದೆ. ಎರಡೂ ಒಕ್ಕೂಟದ ರಾಷ್ಟ್ರಗಳ ನಡುವಿನ ಆಮದು- ರಫ್ತು ಸಮತೋಲನದಿಂದ ಕೂಡಿದೆ. ಶ್ರೀಮಂತ ದೇಶಗಳ ಒಕ್ಕೂಟವಾಗ ಯುರೋಪಿಯನ್ ಯೂನಿಯನ್, ಪಾಸ್ತಾನ, ಬಾಂಗ್ಲಾದೇಶಗಳ ಜೊತೆಯೂ ಉತ್ತಮ ಸಂಬಂಧ ಹೊಂದಿದ್ದರೂ, ಭಾರತಕ್ಕೆ ಆಗಬಹುದಾದ ಲಾಭ ಹೆಚ್ಚು. ಪ್ರಧಾನಮಂತ್ರಿ ನರೇಂದ್ರಮೋದಿ ಧನಾತ್ಮಕ ಹೆಜ್ಜೆ ಇಟ್ಟಿದ್ದಾರೆ, ಎಂದರು.
ಇದೇ ವೇಳೆ ಅವರು, ಯುರೋಪಿಯನ್ ಒಕ್ಕೂಟವನ್ನು ತೊರೆದ ಬ್ರಿಟನ್ ಗೆ ಲಾಭಕ್ಕಿಂತ ನಷ್ವವೇ ಆಗಿದೆ, ಎಂದು ಅಭಿಪ್ರಾಯಪಟ್ಟ ಅವರು 27 ದೇಶಗಳ ಒಕ್ಕೂಟವಾದ ಯುರೋಪಿಯನ್ ಯೂನಿಯನ್ ತೊರೆದು ಬ್ರಿಟನ್ ತನ್ನ ಗಡಿಗಳ ಮೇಲೆ ನಿಯಂತ್ರಣ ಕಳೆದುಕೊಂಡಿದೆ. ನಿರಾಶ್ರಿತರ ನುಸುಳುವಿಕೆ ಹೆಚ್ಚಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ರಾಜಕೀಯವಾಗಿ ಪರಿಸ್ಥಿತಿಯನ್ನು ಬ್ರಿಟನ್ ನಿಭಾಯಿಸಿದ್ದರೂ ಸ್ಪಷ್ಟ ಚಿತ್ರಣ ಸಿಗಲು ಇನ್ನೂ ಕೆಲವು ವರ್ಷ ಬೇಕಾಗಬಹುದು, ಎಂದರು.
ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಜಯರಾಜ್ ಅಮೀನ್ ಅವರು ಮಾತನಾಡಿ, ಯುರೋಪಿಯನ್ ಒಕ್ಕೂಟದ ಸಹಾಯದಿಂದ ಪ್ರಾದೇಶಿಕ ಸಮಗ್ರತೆಯನ್ನು ಬಲಪಡಿಸಿಕೊಳ್ಳುವ ಅವಕಾಶವನ್ನು ದಕ್ಷಿಣ ಏಷ್ಯಾದ ದೇಶಗಳು ತಮ್ಮಕಚ್ಚಾಟದಿಂದ ಕೈ ಚೆಲ್ಲಿದ್ದು ದುರಾದೃಷ್ಟ. ಈಗ ಯೂನಿಯನ್ ದ್ವಿಪಕ್ಷೀಯ ಸಂಬಂಧಕ್ಕಷ್ಟೇ ಹೆಚ್ಚು ಮಹತ್ವ ನೀಡುತ್ತಿದೆ, ಎಂದರು. ಉಸ್ತುವಾರಿ ಪ್ರಾಂಶುಪಾಲ ಡಾ. ಹರೀಶ ಎ ಕಾರ್ಯಕ್ರಮಕ್ಕೆ ಶುಭಕೋರಿದರು.
ಮಾಹೆಯ ಯುರೋಪಿಯನ್ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ. ನೀತಾ ಇನಾಂದಾರ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಡಾ. ಶಾನಿ ಕೆಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಲತಾ ಎ. ಪಂಡಿತ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಜ್ಯಶಾಸ್ತ್ರ ವಿಭಾಗದ ಡಾ. ಆಶಾಲತಾ ಧನ್ಯವಾದ ಸಮರ್ಪಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಗಾಯತ್ರಿ ಎನ್ ಕಾರ್ಯಕ್ರಮ ನಿರೂಪಿಸಿದರು. ವಿವಿಧ ವಿಭಾಗಗಳ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ


