ವಿಷ್ಣುಗುಪ್ತ ವಿವಿ : ಗುರುಕುಲ ಪ್ರವೇಶಕ್ಕೆ ಅರ್ಜಿ ಆಹ್ವಾನ

Upayuktha
0

ಗೋಕರ್ಣ/ ಬೆಂಗಳೂರು : ಭಾರತೀಯ ಭವ್ಯ ಪರಂಪರೆಯನ್ನು ಭಾವಿ ಪೀಳಿಗೆಯಲ್ಲಿ ಉಳಿಸಿ ಬೆಳೆಸುವ ಮಹತ್ಸಂಕಲ್ಪದೊಂದಿಗೆ ಶ್ರೀರಾಮಚಂದ್ರಾಪುರಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲಕ್ಕೆ 2023-24ನೇ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಗುರುಕುಲದಲ್ಲಿ ನಾಲ್ಕರಿಂದ ಹನ್ನೆರಡನೇ ತರಗತಿವರೆಗೆ ವಸತಿಯುತ ಶಿಕ್ಷಣ ಸೌಲಭ್ಯವಿದ್ದು, ಜಾತಿ ಮತಗಳ ಬೇಧವಿಲ್ಲದೇ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ. ಋಷಿಯುಗ ಮತ್ತು ನವಯುಗ ಶಿಕ್ಷಣಗಳ ಸಮ್ಮಿಲನವಿರುವ ದೇಶದ ಏಕೈಕ ಗುರುಕುಲ ಇದಾಗಿದ್ದು, ಪಠ್ಯದ ಜತೆಗೆ ಜೀವನ ಮೌಲ್ಯಗಳಿಗೂ ಒತ್ತು ನೀಡಿ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಇಲ್ಲಿನ ಶಿಕ್ಷಣ ನೆರವಾಗಲಿದೆ.


ನಿಗದಿತ ಪಠ್ಯದ ಜತೆಗೆ ಯೋಗ, ಜ್ಯೋತಿಷ್ಯ, ವಾಸ್ತು, ಆಯುರ್ವೇದ, ಸಂಗೀತ, ವಾದ್ಯ, ನೃತ್ಯ, ಚಿತ್ರ, ಯಕ್ಷಗಾನ, ಕುದುರೆ ಸವಾರಿ ಕಳರಿಪಯಟ್, ಕರಕುಶಲಕಲೆ, ರಂಗೋಲಿ ಕಸೂತಿ, ಪಾರಂಪರಿಕ ಪಾಕಶಾಸ್ತ್ರ, ಗೃಹನಿರ್ವಾಹ ಹೀಗೆ ರೆಲ್ಲೂ ದೊರೆಯದ ಪ್ರಾಚೀನ ಭಾರತದ ಅಪೂರ್ವ ಕಲೆಗಳನ್ನು ಒಂದೇ ಸೂರಿನಡಿ ಮಕ್ಕಳಿಗೆ ಬೋಧಿಸಲಾಗುತ್ತದೆ. ಸಿಇಟಿ/ ಜೆಇಇ /ನೀಟ್/ಸಿಎ/ ಸಿಎಸ್ ಪರೀಕ್ಷೆಗಳಿಗೂ ತರಬೇತಿ ವ್ಯವಸ್ಥೆ ಇದೆ. ಭಾರತೀಯ ಹಬ್ಬ- ಹರಿದಿನಗಳ ಆಚರಣೆಯ ಜತೆಗೆ ಸೂಕ್ತ ವಸತಿಯ ಜತೆಗೆ ಉತ್ತಮ ಸಾತ್ವಿಕ ಆಹಾರ ನೀಡಲಾಗುತ್ತದೆ.


ವಿವರಗಳಿಗೆ ದೂರವಾಣಿ: 9449495247, 9449595248 ಸಂಪರ್ಕಿಸಬಹುದು. ಇ-ಮೇಲ್: office@vishnuguptavvv.org ವೆಬ್‍ಸೈಟ್: www.vishnuguptavv.org


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top