ನಂದಿನಿ ನದಿಗೆ 4 ಕೋಟಿ ರೂ ವೆಚ್ಚದ ನೂತನ ಆಣೆಕಟ್ಟಿಗೆ ಲೋಕಾರ್ಪಣೆ : ಡಾ. ಭರತ್ ಶಟ್ಟಿ

Upayuktha
0

ಕಟೀಲು : ಸನಾತನ ಸಂಸ್ಕೃತಿಯಲ್ಲಿ ನದಿಪೂಜೆಗೆ ವಿಶೇಷವಾದ ಪ್ರಾಧ್ಯಾನತೆ ಇದೆ. ಶಾಸಕರಾದ ಡಾ. ಭರತ್ ಶೆಟ್ಟಿಯವರು 4 ಕೋಟಿ ರೂಪಾಯಿ ವೆಚ್ಚದಲ್ಲಿ ನಂದಿನಿ ನದಿಗೆ ಅಡ್ಡವಾಗಿ ಮಚ್ಚೂರು ಕಾನ ಶ್ರೀ ರಾಮ ಮಂದಿರ ದೇವಸ್ಥಾನದ ಬಳಿ ನಿರ್ಮಿಸಲಾಗಿರುವ ನೂತನ ಅಣೆಕಟ್ಟನ್ನು ನಂದಿನಿ ನದಿಗೆ ಪೂಜೆ ಸಲ್ಲಿಸುವ ಮೂಲಕ  ಲೋಕಾರ್ಪಣೆಗೊಳಿಸಿದರು.


ಇಳಿಸಂಜೆಯ ಗೋಧೂಳಿ ಮುಹೂರ್ತದಲ್ಲಿ ಸಹಸ್ರಾರು ಹಣತೆಯ ಬೆಳಕಿನಲ್ಲಿ ಕಾರ್ಯಕ್ರಮ ಸಂಪನ್ನಗೊಂಡಿತು.


ಗ್ರಾಮದ ನಾಗರಿಕರ ಬಹುಕಾಲದ ಕುಡಿಯುವ ನೀರಿನ ಬವಣೆಯನ್ನು ತಗ್ಗಿಸುವ ಮಾದರಿ ಕಾರ್ಯ ಮಾಡಿರುವ ಡಾ. ಭರತ್ ಶೆಟ್ಟಿಯವರನ್ನು ಊರಿನ ಹಿರಿಯರ ಪ್ರಮುಖರ ಉಪಸ್ಥಿತಿಯಲ್ಲಿ ಆರತಿ ಬೆಳಗಿ ಅಭಿನಂದಿಸಲಾಯಿತು. 


ಈ ಸಂದರ್ಭದಲ್ಲಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ಗೌಡ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹಿನಿ, ಉಪಾಧ್ಯಕ್ಷರಾದ ನಾರಾಯಣ ಎ. ಎಸ್ ,  ಪಂಚಾಯತ್ ಸದಸ್ಯರಾದ ಜಯಂತಿ ನಾಯ್ಕ್ ,ಸುಮನ , ಪೂರ್ಣಿಮಾ ಹರಿಪ್ರಕಾಶ್ , ಜಯಂತಿ ಶಂಕರ್, ರಾಜನೀಶ್,  ಮಾಜಿ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಹೆಗ್ಡೆ , ವೀರಪ್ಪ ಗೌಡ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top