ಬೆಂಗಳೂರು: ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜನವರಿ 12, ಗುರುವಾರ ಸಂಜೆ 7-30ಕ್ಕೆ, ಶ್ರೀಮತಿ ಚೇತನಾ ಜೋಶಿ ಇವರಿಂದ "ಹರಿನಾಮ ಸಂಕೀರ್ತನೆ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ: ಶ್ರೀ ಎನ್. ಜಿ. ಪಾಟೀಲ್ (ಹಾರ್ಮೋನಿಯಂ), ಶ್ರೀ ಕೇಶವ ಜೋಶಿ (ತಬಲಾ), ಶ್ರೀ ರಾಜೇಶ್ ಕುಲಕರ್ಣಿ (ತಾಳ). ಈ ಕಾರ್ಯಕ್ರಮಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ಗುರುರಾಯರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ