ಕರ್ನಾಟಕ ಹೈಕೋರ್ಟ್ ನ ಇಬ್ಬರು ನ್ಯಾಯಮೂರ್ತಿಗಳ ಪ್ರಮಾಣವಚನ ಸ್ವೀಕಾರ

Upayuktha
0 minute read
0

ಬೆಂಗಳೂರು: ಕರ್ನಾಟಕ ಹೈಕೋರ್ಟ್ಗೆ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿರುವ ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಹಾಗೂ ವೆಂಕಟೇಶ್ ತಾವರ್ಯ ನಾಯ್ಕ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.


ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.


ನ್ಯಾಯಮೂರ್ತಿಗಳ ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರ್ಲೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top