23 ನೇ ತುಳು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ. ವಸಂತ ಕುಮಾರ ಪೆರ್ಲ ಆಯ್ಕೆ

Upayuktha
0


ಒಡಿಯೂರು: ಜನವರಿ 30 ಹಾಗೂ 31 ರಂದು ಒಡಿಯೂರಿನಲ್ಲಿ ನಡೆಯಲಿರುವ 23 ನೇ ತುಳು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಕವಿ, ಸಾಹಿತಿ ಡಾ. ವಸಂತ ಕುಮಾರ ಪೆರ್ಲ ಆಯ್ಕೆಯಾಗಿದ್ದಾರೆ.

ನಮ್ಮ ನೆಲ, ನಮ್ಮ ಜಲ ಎಂಬ ಪರಿಕಲ್ಪನೆ ಅಡಿಯಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ವಿಚಾರ ಸಂಕಿರಣ, ವಿವಿಧ ಜಾನಪದ ನೃತ್ಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.


ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅಜನೆ, ದುತ್ತೈತ ಎಂಬ ಕವನ ಸಂಕಲನಗಳು, ಮುನ್ನುಡಿಗಳ ಸಂಕಲನವಾದ ಮದಿಪುದ ಪಾತೆರೊಲು, ಅನುವಾದಿತ ಸಂಕಲನ ರಬೀಂದ್ರ ಕಬಿತೆಲು, ತುಳುಕಾವ್ಯೊ ಎಂಬ ಸಾಹಿತ್ಯ ಚರಿತ್ರೆ, ಪ್ರಾತಿನಿಧಿಕ ತುಳು ಕಬಿತೆಲು, ಆಕಾಶವಾಣಿ ತುಳು ಕತೆಕ್ಕುಲು, ಇಂಚಿಪೊದ ತುಳು ಕಬಿತೆಲು, ಕಬಿತೆ -2017 ಮುಂತಾದ ಸಂಪಾದಿತ ಕೃತಿಗಳಿಂದ ಪ್ರಸಿದ್ಧರಾಗಿರುವ ಡಾ. ಪೆರ್ಲ ಅವರು ಕನಕದಾಸರ ಮೋಹನ ತರಂಗಿಣಿ, ವಚನ ಸಾಹಿತ್ಯ ಮೊದಲಾದವುಗಳನ್ನು ತುಳುವಿಗೆ ಅನುವಾದಿಸಿದ್ದಾರೆ. ರಾಷ್ಟ್ರೀಯ ಮಟ್ಟದ ಹಲವು ಸಮ್ಮೇಳನಗಳಲ್ಲಿ ತುಳುವನ್ನು ಪ್ರತಿನಿಧಿಸಿದ್ದಾರೆ. ಇವರ ಹಲವು ತುಳು ಕೃತಿಗಳು ದೇಶದ ಇತರ ಭಾಷೆಗಳಿಗೆ ಅನುವಾದಗೊಂಡಿವೆ. 

ನೂರಾರು ತುಳು ಕಾರ್ಯಕ್ರಮಗಳನ್ನು ಸಂಘಟಿಸಿರುವರಲ್ಲದೆ ನೂರಾರು ಮಂದಿ ಕವಿ-ಲೇಖಕರನ್ನು ಪ್ರೋತ್ಸಾಹಿಸಿ ಬರವಣಿಗೆಯ ಕಾಯಕಕ್ಕೆ ಹಚ್ಚಿದ್ದಾರೆ. ಉತ್ತಮ ವಿಮರ್ಶಕರಾಗಿ ವಾಗ್ಮಿಗಳಾಗಿ ಹೆಸರಾಗಿರುವ ಡಾ. ಪೆರ್ಲ ಅವರು ಮಂಗಳೂರು ಆಕಾಶವಾಣಿಯ ಮೂಲಕ ತುಳುವಿಗೆ ಭದ್ರ ಬುನಾದಿ ಹಾಕಿಕೊಡುವಲ್ಲಿ ಶ್ರಮಿಸಿದವರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top