ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ದಿನಾಂಕ : 25/01/2023 ರಂದು ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಜಯಪ್ರಕಾಶ್ ಶೆಟ್ಟಿಯವರ “ನುಡಿಯಾಟದ ನಡೆ, ಬಯಲ ಬೆರೆಗು, ತಣ್ಣನೆಯ ದೀಪಗಳು” ಎಂಬ ಮೂರು ವಿಮರ್ಶಾ ಸಂಕಲನಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ನಟರಾಜ ಎಸ್. ಬೂದಾಳು, ಡಾ. ಜಿ. ವಿ. ಆನಂದಮೂರ್ತಿ ಹಾಗೂ ಪ್ರೊ. ರಾಮಲಿಂಗಪ್ಪ ಟಿ. ಬೇಗೂರು ಇವರುಗಳಿಂದ ಬಿಡುಗಡೆಗೊಳ್ಳಲಿದೆ.
ತದನಂತರದಲ್ಲಿ ಜಯಪ್ರಕಾಶ್ ಶೆಟ್ಟಿಯವರ ಬರಹಗಳ ಅವಲೋಕನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ಇವರ ಅಧ್ಯಕ್ಷತೆಯ ಈ ಕಾರ್ಯಕ್ರಮದಲ್ಲಿ ಕೆ.ಆರ್. ನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ಚಿಕ್ಕಮಗಳೂರು ಗಣೇಶ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ