ಬೆಂಗಳೂರು : ಮಲ್ಲೇಶ್ವರದ ಈಜುಕೊಳದ ಬಡಾವಣೆಯ (ಸುಧೀಂದ್ರನಗರ) ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಗುರುರಾಯರ 428ನೇ ಜನ್ಮದಿನೋತ್ಸವದ ಪ್ರಯುಕ್ತ ಫೆಬ್ರವರಿ 26, ಭಾನುವಾರ ಬೆಳಗ್ಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನಕ್ಕೆ ಫಲ-ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಲಕ್ಷಪುಷ್ಪಾರ್ಚನೆ, ವಿಶೇಷ ಅಲಂಕಾರ, ಶ್ರೀ ರಾಘವೇಂದ್ರ ಅಷ್ಟಾಕ್ಷರ ಹೋಮ, ಮಹಾಮಂಗಳಾರತಿ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು ಎಂದು ಶ್ರೀ ಮಠದ ಗೌರವ ಕಾರ್ಯದರ್ಶಿಗಳಾದ ಶ್ರೀ ನರಹರಿ ಆಚಾರ್ ಅವರು ತಿಳಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ