ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನ 3ನೇ ದಿನ: ಉದಯರಾಗ- ಸ್ಯಾಕ್ಸೋಫೋನ್ ವಾದನ

Upayuktha
0

ಉಜಿರೆ: ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರದ ಕಾರ್ಯಕ್ರಮಗಳು ಮುಂಜಾನೆ ಉದಯರಾಗದೊಂದಿಗೆ ಪ್ರಾರಂಭಗೊಂಡವು.

 

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಆಕಾಶವಾಣಿ ‘ಎ’ ಗ್ರೇಡ್ ಕಲಾವಿದ ಡಿ.ಬಿ. ಪ್ರಕಾಶ ದೇವಾಡಿಗ ಅವರು ಸ್ಯಾಕ್ಸೋಫೋನ್ ವಾದನದ ಮೂಲಕ ಭಕ್ತಿಭಾವದ ರಾಗಲಹರಿಯನ್ನು ಹರಿಸಿದರು.


ಅತ್ಯಂತ ಸುಶ್ರಾವ್ಯವಾಗಿ ಮಹಾಗಣಪತಿ ಕೃತಿಯ ಭಜಮಾನಸದೊಂದಿಗೆ ಆರಂಭಗೊಂಡ ಸ್ಯಾಕ್ಸೋಫೋನ್ ವಾದನವು ಜಯಜಯ ಪದ್ಮನಾಭ ಕೀರ್ತನೆ, ರಾಜರಾಜಿತೇ ಕೃತಿ, ಹರಿಕುಣಿರಾಗ, ಹರಿಮಣ ಮರಾಠಿ ಭಕ್ತಿ ಗೀತೆ, ಕನ್ನಡದ ನಿತ್ಯೋತ್ಸವ ಮತ್ತು ‘ಭಾಗ್ಯದ ಲಕ್ಷ್ಮೀ’ ಯೊಂದಿಗೆ ರಾಗಸುಧೆ ಹರಿಸಿ ಸಮಾಪ್ತಿಗೊಂಡಿತು.


ಮುಖ್ಯ ವಾದಕರಿಗೆ ಸಹ ಸ್ಯಾಕ್ಸೋಫೋನ್ ವಾದಕರಾಗಿ ತ್ಯಾಗರಾಜ್ ಹಾಸನ, ನಾಗಪ್ರಿಯ ಕುತ್ರೊಟ್ಟು ಹಾಗೂ ಜ್ಞಾನಶ್ರೀ ಕುತ್ರೊಟ್ಟು ಜತೆಯಾದರು. ತಬಲಾದಲ್ಲಿ ಗೌರಿ ಪ್ರಸಾದ್ ಹಾಗೂ ಡೊಲ್ಕಿಯಲ್ಲಿ ಪ್ರವೀಣ್ ದೇವಾಡಿಗ ಸಾಥ್ ನೀಡಿದರು.


ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಮಹಾವೀರ್ ಜೈನ್ ಕಾರ್ಯಕ್ರಮ ನಿರ್ವಹಿಸಿ, ಕಲಾವಿದ ಡಿ.ಬಿ. ಪ್ರಕಾಶ ದೇವಾಡಿಗ ಅವರನ್ನು ಸಮ್ಮಾನಿಸಿದರು.


ವರದಿ- ಸೋಮೇಶ್ವರ ಗುರುಮಠ ಮತ್ತು ಸ್ಯಾನ್ರಿತಾ ಮಂದಾತ. 

ಪ್ರಥಮ ವರ್ಷ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,

ಎಸ್. ಡಿ. ಎಂ ಸ್ನಾತಕೋತ್ತರ ಕೇಂದ್ರ, ಉಜಿರೆ.


ಚಿತ್ರ: ಶಶಿಧರ ನಾಯ್ಕ ಎ,

ದ್ವಿತೀಯ ವರ್ಷ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,

ಎಸ್.ಡಿ.ಎಂ ಸ್ನಾತಕೊತ್ತರ ಕೇಂದ್ರ ಉಜಿರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top