ಕಲಾಕೇಂದ್ರದ ಒಟ್ಟು 200 ಮಂದಿ ವಿದ್ಯಾರ್ಥಿಗಳು ತಂಡೋಪತಂಡವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದರು. ಕೇರಳ ಶೈಲಿಯ ಮೋಹಿನಿಯಾಟ್ಟಂ, ಶಿವತಾಂಡವ ನೃತ್ಯ, ಗುಜರಾತಿನ ಗರ್ಬಾ ದಾಂಡ್ಯ, ಕಥಕ್ ಹೀಗೆ ವಿವಿಧ ರೀತಿಯ ಭಕ್ತಿ ಭಾವ ಸ್ಫುರಿಸುವ ನೃತ್ಯಗಳು ಕಲಾರಾಧಕರ ಮನಸೆಳೆದವು.
ಸತತ ಒಂದು ಗಂಟೆ ಕಾಲ ನಡೆದ ನೃತ್ಯ ಪ್ರದರ್ಶನದಲ್ಲಿ ಮಹಿಷಾಸುರ ಮರ್ದನದ ದೃಶ್ಯ ಕಲಾ ವೈಭವ ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿತು. ಶಿವತಾಂಡವ ನೃತ್ಯವನ್ನು ಅಮೋಘವಾಗಿ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು.
ಕಲಾಕೇಂದ್ರದ ವಿದ್ಯಾರ್ಥಿಗಳನ್ನು ಎಸ್ ಡಿ ಎಂ ಕಾಲೇಜಿನ ಕ್ಷೇಮಪಾಲನಾ ಅಧಿಕಾರಿ ಬಿ. ಸೋಮಶೇಖರ್ ಶೆಟ್ಟಿ ಅಭಿನಂದಿಸಿದರು.
ವರದಿ: ಐಶ್ವರ್ಯ ಕೋಣನ,
ದ್ವಿತೀಯ ವರ್ಷ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರ, ಉಜಿರೆ
ಚಿತ್ರ: ಶಶಿಧರ ನಾಯ್ಕ, ದ್ವಿತೀಯ ವರ್ಷ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರ, ಉಜಿರೆ
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ


