ಮಂಗಳೂರು: ರಾಜ್ಯ ಬಜೆಟ್ನಲ್ಲಿ ಕರಾವಳಿಗೆ ವಿಶೇಷ ಪ್ರಾಧಾನ್ಯತೆ ನೀಡಿ ಮೀನುಗಾರಿಕೆ, ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗಿದೆ. ಅಂಗನವಾಡಿ ಕಾರ್ಯಕರ್ತರಿಗೆ ಮಾಸಾಶನ ಹೆಚ್ಚಳ, ಎಸ್ ಸಿ ಎಸ್ ಟಿ ಬಡ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್, ಅರ್ಹರಿಗೆ ಮನೆ ನಿರ್ಮಾಣಕ್ಕೆ ನೆರವು, ಅಯಾ ಭಾಗದ ಸಂಸ್ಕ್ರತಿ ಉಳಿಸಲು ಥೀಮ್ ಪಾರ್ಕ್ ಉತ್ತಮ ಯೋಜನೆ; ನಮ್ಮ ನಿರೀಕ್ಷೆಯಂತೆ ಬಜೆಟ್ ಮೂಡಿ ಬಂದಿದ್ದು, ಜನತೆಗೆ ಉತ್ತಮ ಬಜೆಟ್ ನೀಡಿದ ಮುಖ್ಯಮಂತ್ರಿಗೆ ಅಭಿನಂದನೆಗಳು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.
ಇನ್ನು 5 ವರ್ಷದಲ್ಲಿ ಕರಾವಳಿ ವ್ಯಾಪ್ತಿಯಲ್ಲಿ ಉದ್ಯಮ, ಪ್ರವಾಸೋದ್ಯಮ, ಮೀನುಗಾರಿಕಾ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ಕಾಣಲಿದೆ ಎಂದು ಹೇಳಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


