ರಾಷ್ಟ್ರಮಟ್ಟದ ಕರಾಟೆ : ವಿವೇಕಾನಂದ ಪದವಿ ಪೂರ್ವ ಕಾಲೇಜಿಗೆ ಪ್ರಶಸ್ತಿ

Upayuktha
0

ಪುತ್ತೂರು : ಮೈಸೂರಿನ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಓಪನ್‍ ಟೂರ್ನಮೆಂಟ್‍ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಪುತ್ತೂರಿನ ಅಮ್ಚಿನಡ್ಕದ ಮಾಡ್ನೂರು ಗ್ರಾಮದ ರಮೇಶ್ ಎ ಎಂ ಮತ್ತು ಲಲಿತಾ ದಂಪತಿ ಪುತ್ರನಾಗಿರುವ ಪ್ರಥಮ ಪಿಯುಸಿ ಕಲಾ ವಿಭಾಗದ ಅರುಣ್‍ಕುಮಾರ್‍ ಎ.ಆರ್‍ಕಟಾ  ಮತ್ತು ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಾವು ರಾಜೇಶ್ ಮತ್ತು ಲೀಲಾವತಿ ದಂಪತಿ ಪುತ್ರನಾಗಿರುವ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಚೇತನ್‍ ಎನ್‍ ಆರ್‍ಕಟಾ ವಿಭಾಗದಲ್ಲಿ ಪ್ರಥಮ ಮತ್ತು ಕುಮಿಟೆ ವಿಭಾಗದಲ್ಲಿ ತೃತೀಯ ಬಹುಮಾನ ಗಳಿಸಿದ್ದಾರೆ. 


ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


Post a Comment

0 Comments
Post a Comment (0)
To Top