ಜಿಲ್ಲೆಯಲ್ಲಿ ಫಲಾನುಭವಿಗಳ ಬೃಹತ್ ಸಮ್ಮೇಳನ : ಉಸ್ತುವಾರಿ ಸಚಿವ ಅಂಗಾರ

Upayuktha
0

 


ಉಡುಪಿ : ಜಿಲ್ಲೆಯಲ್ಲಿ ಸರಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ಫಲಾನುಭವಿಗಳಿಗೆ ನೇರವಾಗಿ ವಿತರಿಸಲು ಜಿಲ್ಲಾ ಮಟ್ಟದ ಫಲಾನುಭವಿಗಳ ಬೃಹತ್ ಸಮ್ಮೇಳನವನ್ನು ಮಾರ್ಚ್ 5 ರಂದು ಕಾಪು ಕ್ಷೇತ್ರದಲ್ಲಿಆಯೋಜಿಸಲುಎಲ್ಲಾಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾಉಸ್ತುವಾರಿ ಸಚಿವಎಸ್.ಅಂಗಾರಸೂಚನೆ ನೀಡಿದರು.


ಅವರು ಇಂದು, ನಗರದಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು.


ಜಿಲ್ಲೆಯ ಸಾರ್ವಜನಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಫಲಾನುಭವಿ ಆಧಾರಿತ ವಿವಿಧ ಇಲಾಖೆಗಳ ಯೋಜನೆಗಳ ಸವಲತ್ತುಗಳನ್ನು ಒಂದೇ ವೇದಿಕೆಯಲ್ಲಿ ವಿತರಿಸಲು ಅನುಕೂಲವಾಗುವಂತೆಎಲ್ಲಾ ಇಲಾಖೆಗಳು ತಮ್ಮಲ್ಲಿನ ಫಲಾನುಭವಿ ಆಧಾರಿತ ಯೋಜನೆಗಳಡಿಯಲ್ಲಿ ನೀಡುವ ಸವಲತ್ತುಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡುವಂತೆ ಸಚಿವರು ತಿಳಿಸಿದರು. 


ಎಲ್ಲಾ ಇಲಾಖೆಗಳು ತಮಗೆ ನೀಡಿರುವ ಫಲಾನುಭವಿ ಆಧಾರಿತಗುರಿಯಲ್ಲಿ ಸಂಪೂರ್ಣ ಪ್ರಗತಿ ಸಾಧಿಸಿ ಜಿಲ್ಲೆಯಯಾವುದೇ ಫಲಾನುಭವಿಗಳು ಸವಲತ್ತುಗಳಿಂದ ವಂಚಿತರಾಗದಂತೆಎಚ್ಚರಿಕೆಯಿಂದಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದ ಸಚಿವರು, ಯೋಜನೆಯ ಅನುಷ್ಠಾನಕ್ಕೆ ಅನುದಾನದಕೊರತೆಅಥವಾ ಮತ್ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿತಮ್ಮ ಗಮನಕ್ಕೆತರುವಂತೆ ಹಾಗೂ ಈ ಬಗ್ಗೆ ಸಂಬಂಧಪಟ್ಟ ಸಚಿವರು ಮತ್ತು ಇಲಾಖೆಗಳ ಕಾರ್ಯದರ್ಶಿ ಅವರೊಂದಿಗೆ ಚರ್ಚಿಸಿ, ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ರಾಜ್ಯಮಟ್ಡದಲ್ಲಿಎಲ್ಲಾಅಗತ್ಯಕ್ರಮ ಕೈಗೊಳ್ಳಲಾಗುವುದು ಎಂದರು.


ಜಿಲ್ಲೆಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸುವ ಮೂಲಕ ಅವರಆರ್ಥಿಕ ಬೆಳವಣಿಗೆಗೆ ಬೆಂಬಲ ನೀಡುವಜೊತೆಗೆ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತುಅನುದಾನದ ಸದ್ಬಳಕೆಯು ಇದರಿಂದ ಸಾಧ್ಯವಾಗಲಿದೆ.ಇಲಾಖೆಗಳಲ್ಲಿ ಇದುವರೆಗೆಅನುದಾನ ಲಭ್ಯವಿದ್ದು, ಫಲಾನುಭವಿಗಳನ್ನು ಗುರುತಿಸಲು ಸಾಧ್ಯವಾಗದೇಇದ್ದಲ್ಲಿ, ಈ ಬಗ್ಗೆ ಅಧಿಕಾರಿಗಳು ತಕ್ಷಣದಿಂದಲೇಕಾರ್ಯಪ್ರವೃತ್ತರಾಗುವಂತೆ ಸೂಚಿಸಿದರು.


ಕೃಷಿ, ಮೀನುಗಾರಿಕೆ, ತೋಟಗಾರಿಕೆ, ಪಶುಪಾಲನೆ, ಸಮಾಜಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆ, ವಿವಿಧ ನಿಗಮಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಇಲಾಖೆ,ಕಾರ್ಮಿಕ ಇಲಾಖೆ, ಕೈಗಾರಿಕಾ ಇಲಾಖೆ, ಕಂದಾಯಇಲಾಖೆಯ 94 ಸಿ, 94 ಸಿಸಿ ಹಕ್ಕುಪತ್ರಗಳು, ಪಿಂಚಣಿ ಆದೇಶಗಳು, ಪಡಿತರಚೀಟಿ ಮತ್ತಿತರ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಿಸುವಂತೆ ಸೂಚಿಸಿದ ಸಚಿವರು, ಎಲ್ಲಾ ಫಲಾನುಭವಿಗಳಿಗೆ ನೇರವಾಗಿ, ಒಂದೇ ವೇದಿಕೆಯಲ್ಲಿ ಸವಲತ್ತು ವಿತರಿಸಲು ಅನುಕೂಲವಾಗುವಂತೆಅವರನ್ನುಕಾರ್ಯಕ್ರಮಕ್ಕೆಕರೆತರಲುಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದರು.  


ಜಿಲ್ಲೆಯಎಲ್ಲಾ ತಾಲೂಕುಗಳಲ್ಲಿಯೂ ಸಹ ಫಲಾನುಭವಿಗಳ ಸಮ್ಮೇಳನ ಆಯೋಜನೆಗೆಅಗತ್ಯ ಪೂರ್ವ ತಯಾರಿಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದ ಸಚಿವರು, ಈ ಕಾರ್ಯಕ್ರಮದಲ್ಲಿಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದಕಾರ್ಯನಿರ್ವಹಿಸಿ, ಸಾರ್ವಜನಿಕರಿಗೆ ಸರಕಾರದ ಸವಲತ್ತುಗಳ ಪ್ರಯೋಜನದೊರೆಯುವಂತೆ ನೋಡಿಕೊಳ್ಳಬೇಕು ಎಂದರು.


ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್.ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಪ್ರೊಬೇಷನರಿಐ.ಎ.ಎಸ್‍ಅಧಿಕಾರಿ ಯತೀಶ್, ಅಪರಜಿಲ್ಲಾಧಿಕಾರಿ ವೀಣಾ ಬಿ.ಎನ್. ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top