ಉಡುಪಿ : ಸರಕಾರ ನೀಡುವ ವೈಯಕ್ತಿಕ ಸವಲತ್ತುಗಳನ್ನು ಪಡೆದುಕೊಳ್ಳುವ ನಾಗರೀಕರು ಅವುಗಳನ್ನು ಸದ್ಬಳಕೆ ಮಾಡಿಕೊಂಡುಆರ್ಥಿಕವಾಗಿ ಸಬಲರಾಗಬೇಕುಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾಉಸ್ತುವಾರಿ ಸಚಿವಎಸ್.ಅಂಗಾರ ಹೇಳಿದರು.
ಅವರು ಇಂದು, ನಗರದ ಕಿದಿಯೂರು ಹೋಟೆಲ್ನ ಮಾಧವಕೃಷ್ಣ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಾ.ಬಿ.ಆರ್ಅಂಬೇಡ್ಕರ್ಅಭಿವೃದ್ಧಿ ನಿಗಮ, ಕರ್ನಾಟಕರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ವಿವಿಧಅಭಿವೃದ್ಧಿ ನಿಗಮಗಳು ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ನಿಗಮಗಳ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಹಾಗೂ ಪೌರ ಕಾರ್ಮಿಕರಿಗೆಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರಕಾರವು ವಿವಿಧ ಇಲಾಖೆಗಳು ಮತ್ತು ನಿಗಮಗಳ ಮೂಲಕ ಹಲವಾರು ಯೋಜನೆಗಳಲ್ಲಿಆರ್ಥಿಕವಾಗಿದುರ್ಬಲವಾಗಿರುವ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಜನತೆಯಆರ್ಥಿಕಅಭಿವೃದ್ಧಿಗಾಗಿ ವೈಯಕ್ತಿಕವಾಗಿ ಸವಲತ್ತುಗಳನ್ನು ವಿತರಿಸುತ್ತಿದ್ದು, ಸಾರ್ವಜನಿಕರುಈ ಸವಲತ್ತುಗಳನ್ನು ಪಡೆದು ಸ್ವಾವಲಂಭಿಗಳಾಗಿ ಮತ್ತುಆರ್ಥಿಕವಾಗಿ ಸಬಲರಾಗಿಅಭಿವೃದ್ಧಿ ಹೊಂದಬೇಕುಎಂದರು.
ಮೀನುಗಾರಿಕಾಇಲಾಖೆಯಲ್ಲಿ ಮೀನುಗಾರರನ್ನುಆರ್ಥಿಕವಾಗಿ ಸಬಲರನ್ನಾಗಿ ಮಾಡಲು, ಅವರನ್ನು ಮಾರುಕಟ್ಟೆ ವ್ಯವಸ್ಥೆಯಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ, ಸಮುದ್ರದಲ್ಲಿ ಹಿಡಿದ ಮೀನುಗಳನ್ನು ನೇರವಾಗಿಗ್ರಾಹಕರಿಗೆ ಮಾರಾಟ ಮಾಡಿ, ಹೆಚ್ಚಿನಆರ್ಥಿಕ ಲಾಭ ಗಳಿಸಲು ಅನುಕೂಲವಾಗುವಂತೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದಯೋಜನೆಯಡಿತ್ರಿಚಕ್ರ ವಾಹನ ವಿತರಿಸುವಯೋಜನೆಯನ್ನುಜಾರಿಗೆತರಲಾಗಿದೆ. ಈ ವಾಹನದಲ್ಲಿಕೋಲ್ಡ್ ಸ್ಟೋರೆಜ್ ಮತ್ತು ಪ್ಯಾಕಿಂಗ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವ ಮೂಲಕ ಗ್ರಾಹಕರಿಗೆತಾಜಾ ಮೀನು ಮಾರಾಟ ಮಾಡಲು ಸಾಧ್ಯವಾಗಲಿದೆಎಂದರು.
ಸರಕಾರದಿಂದ ಸವಲತ್ತುಗಳನ್ನು ಪಡೆದ ಸಾರ್ವಜನಿಕರುಅದರ ಸದುಪಯೋಗಪಡಿಸಿಕೊಂಡು ಇತರರಿಗೆ ಪ್ರೇರಣೆಯಾಗಬೇಕು ಹಾಗೂ ಸವಲತ್ತುಗಳನ್ನು ಪಡೆದವರೇ ಮತ್ತೆ ಮತ್ತೆ ಪಡೆಯದೇ, ಎಲ್ಲರಿಗೂ ಸಮಾನವಾಗಿದೊರಕಿಸಲು ಪ್ರಯತ್ನಿಸಬೇಕುಎಂದರು.
ಶಾಸಕ ಕೆ.ರಘುಪತಿ ಭಟ್ ಕಾರ್ಯಕ್ರಮದಅಧ್ಯಕ್ಷತೆ ವಹಿಸಿದ್ದರು.
ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಇಲಾಖೆ ಸಚಿವಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಯೋಜನೆಗಳನ್ನು ಪಡೆದುಕೊಂಡ ಫಲಾನುಭವಿಗಳು ಅದರ ಸದುಪಯೋಗ ಪಡಿಸಿಕೊಳ್ಳಬೇಕು. ಸ್ವಂತದುಡಿಮೆಯಲ್ಲಿ ಬದುಕಲು ಇಚ್ಛಿಸುವ ಪ.ಜಾತಿ ಮತ್ತು ಪಂಗಡದಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಿಸುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ500 ದ್ವಿಚಕ್ರ ವಾಹನಗಳನ್ನು ನೀಡಲಾಗುತ್ತಿದ್ದು, ಈ ಮೂಲಕ ಅವರುತರಕಾರಿ,ಮೀನು,ಬಟ್ಟೆ ಹಾಗೂ ಮುಂತಾದ ವ್ಯಾಪಾರ ಮಾಡಲು ಸರಕಾರ ಉತ್ತೇಜನ ನೀಡಲಾಗುತ್ತದೆಎಂದರು.
ರಾಜ್ಯದಲ್ಲಿ ಹೊಲಿಗೆ ತರಬೇತಿ ಪಡೆದಿರುವ ಹಿಂದುಳಿದ ವರ್ಗದ ಮಹಿಳೆಯರಿಗೆ ಶೀಘ್ರದಲ್ಲೇ 9000 ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು.ರಾಜ್ಯದಲ್ಲಿ ಈಗಾಗಲೇ 12000 ಪೌರಕಾರ್ಮಿಕರ ಹುದ್ದೆಯನ್ನುಖಾಯಂ ಮಾಡಲಾಗಿದೆ.ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣ, ಬೋರ್ವೆಲ್ಕೊರೆಯುವ ಮೊತ್ತವನ್ನು ನೇರವಾಗಿ ಫಲಾನುಭವಿಯ ಖಾತೆಗೆ ಜಮೆ ಮಾಡಲಾಗುತ್ತಿದೆ.ಪ.ಜಾತಿ, ಪಂಗಡದ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಫಾಯಿ ಕರ್ಮಚಾರಿಗಳಿಗೆ ಸನ್ಮಾನ, ಫಲಾನುಭವಿಗಳಿಗೆ ಆಟೋರಿಕ್ಷಾ, ಟ್ಯಾಕ್ಸಿ, ಹೊಲಿಗೆ ಯಂತ್ರ ವಿತರಣೆ, ಮಂಜೂರಾತಿಆದೇಶ ಪತ್ರ, ಸಾಲ ಸಹಾಯಧನಚೆಕ್ ವಿತರಣೆ, ಪೌರಕಾರ್ಮಿಕರ ಮಕ್ಕಳಿಗೆ ಲ್ಯಾಪ್ಟಾಪ್ ವಿತರಣೆ ಸೇರಿದಂತೆ 100 ಕ್ಕೂ ಹೆಚ್ಚು ಫಲಾನುಭವಿಗಳಿಗೆ ರೂ.2 ಕೋಟಿಗೂಅಧಿಕ ಮೊತ್ತದ ಸವಲತ್ತುಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಡಿ.ದೇವರಾಜುಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರವಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಶಂಕರ್ ಮಲ್ಲಾರ್, ಉಡುಪಿ ಲಿಡ್ಕರ್ನ ವ್ಯವಸ್ಥಾಪಕ ತಿಪ್ಪೇಸ್ವಾಮಿ, ಸಫಾಯಿ ಕರ್ಮಚಾರಿ ನಿಗಮದ ವೆಂಕಟೇಶ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ದಿನಕರ ಬಾಬು ಮತ್ತಿತರರು ಉಪಸ್ಥಿತರಿದ್ದರು.
ಹಿಂದುಳಿದ ವರ್ಗಗಳ ಕಲ್ಯಾಣಇಲಾಖೆಯ ಜಿಲ್ಲಾಅಧಿಕಾರಿ ಸಚಿನ್ಕುಮಾರ್ ಸ್ವಾಗತಿಸಿದರು.ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು.ಜಿಲ್ಲಾ ಸಮಾಜಕಲ್ಯಾಣಾಧಿಕಾರಿಅನಿತಾ ಮಡ್ಲೂರು ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ