ಮುದಗೊಳಿಸಿದ ಹರಿನಾಮ ಸಂಕೀರ್ತನೆ

Upayuktha
0

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಬಸವೇಶ್ವರನಗರದ ಶ್ರೀ ಮಾಧ್ವ ಸಂಘದಲ್ಲಿ ಏರ್ಪಡಿಸಿದ್ದ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕೊನೆಯ ದಿನವಾದ ಫೆ. 10ರಂದು ಹರಿನಾಮ ಸಂಕೀರ್ತನೆ ಕಾರ್ಯಕ್ರಮದಲ್ಲಿ ಗಾಯಕಿ ಶ್ರೀಮತಿ ಅನುಷಾ ಎಸ್. ರಾಘವೇಂದ್ರ ಅವರು ಪ್ರಸಿದ್ಧ ಹರಿದಾಸರ ಅಪರೂಪದ ಕೃತಿಗಳನ್ನು ಪ್ರಸ್ತುತ ಪಡಿಸಿದರು. 

ಶ್ರೀ ಬಿ.ಆರ್. ಪ್ರಕಾಶ್ ಕೀ-ಬೋಡ್೯ ವಾದನದಲ್ಲಿ, ಶ್ರೀ ಶ್ರೀನಿವಾಸ ಕಾಖಂಡಕಿ ತಬಲಾ ವಾದನದಲ್ಲಿ ಸಾಥ್ ನೀಡಿದರು.


ಟಿ ಟಿ ಡಿ ಹೆಚ್ ಡಿ ಪಿ ಪಿ ಯ ಕಾರ್ಯಕ್ರಮಗಳ ನಿರ್ವಹಣಾಧಿಕಾರಿ ಡಾ. ಪಿ. ಭುಜಂಗ ರಾವ್ ಅವರು ವಂದನಾರ್ಪಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಅನೇಕ ಸಂಗೀತಾಭಿಮಾನಿಗಳು ಹಾಗೂ ಮಾಧ್ವ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಫೆಬ್ರವರಿ 7 ರಿಂದ 10 ರ ವರೆಗೆ ಧಾರ್ಮಿಕ-ಸಾಂಸ್ಕೃತಿಕ  ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮೊದಲ ಮೂರು ದಿನಗಳು ವಿವಿಧ ಭಜನಾ ಮಂಡಲಿಗಳಿಂದ ಭಜನೆ, ಪಂಡಿತರಿಂದ ಉಪನ್ಯಾಸ ಜರುಗಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Advt Slider:
To Top