ತುಳು, ದೈವ–ದೇವರುಗಳು ಮಾತಾಡುವಂತಹ ಭಾಷೆ: ಶಾಸಕ ಯು.ಟಿ.ಖಾದರ್

Upayuktha
0

ಬೆಂಗಳೂರು: ತುಳು ಭಾಷೆ, ದೈವ–ದೇವರುಗಳು ಮಾತಾಡುವಂತಹ ಭಾಷೆಯಾಗಿದ್ದು, ಇದನ್ನು ಎರಡನೇ ರಾಜ್ಯಭಾಷೆಯಾಗಿ ಘೋಷಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ ಆಗ್ರಹಿಸಿದ ಪ್ರಸಂಗ ವಿಧಾನಸಭಾ ಕಲಾಪದlಲ್ಲಿ ಬುಧವಾರ ನಡೆಯಿತು.


ತುಳು ಭಾಷೆಗೆ ಅದರದೇ ಆದಂತಹ ಇತಿಹಾಸವಿದೆ ಮತ್ತು ಸಂಸ್ಕೃತಿ ಇದೆ. ತುಳು ದೈವ–ದೇವರುಗಳು ಮಾತಾಡುವಂತಹ ಭಾಷೆ ತುಳು, ಹಾಗಾಗಿ ಈ ಭಾಷೆಯನ್ನು ಎರಡನೇ ರಾಜ್ಯಭಾಷೆಯನ್ನಾಗಿ ಘೋಷಿಸಬೇಕು ಎಂದು ಖಾದರ್ ಆಗ್ರಹಿಸಿದರು.


ಆಗ ಮಧ್ಯಪ್ರವೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಇವರ ಜಿಲ್ಲೆಗಳಲ್ಲಿ ದೇವರು ಮಾತನಾಡುತ್ತವೆ,  ದೇವರು ತುಳುವಿನಲ್ಲಿ ಮಾತಾಡ್ತಾರಾ ಎಂದು ವ್ಯಂಗ್ಯವಾಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top