ಕೊರಗ ಸಮುದಾಯವನ್ನು ಸದೃಢಗೊಳಿಸಬೇಕು : ಶಾಸಕ ರಘುಪತಿ ಭಟ್

Upayuktha
0

ಉಡುಪಿ : ಜಿಲ್ಲೆಯ ಮೂಲ ನಿವಾಸಿಗಳಾದ ಕೊರಗ ಸಮುದಾಯದವಲ್ಲಿಆತ್ಮ ವಿಶ್ವಾಸ ಮೂಡಿಸಿ,ಅವರನ್ನು ಇತರ ಸಮುದಾಯಗಳೊಂದಿಗೆ ಮುಕ್ತವಾಗಿ ಬೆರೆಯಲು ಮಾನಸಿಕವಾಗಿ ಸದೃಢಗೊಳಿಸಲು ಎಲ್ಲಾ ಸಮುದಾಯದವರೂ ಪ್ರಯತ್ನಿಸಬೇಕು, ಕೊರದ ಸಮುದಾಯದಜನತೆಯೂ ಸಹ ಶಿಕ್ಷಣವಂತರಾಗಿ ಆತ್ಮ ವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಶಾಸಕ ರಘುಪತಿ ಭಟ್  ಹೇಳಿದರು.


ಅವರು ಇಂದು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಉಡುಪಿ ನಗರಸಭೆ ಹಾಗೂ ಕೊರಗ ಸಂಘಟನೆಗಳ ಸಹಯೋಗದೊಂದಿಗೆ,  ಪುತ್ತೂರು ನಲ್ಲಿ 3 ಕೋಟಿರೂ ವೆಚ್ಚದಲ್ಲಿ ನಿರ್ಮಾಣಗೊಂಡ ಆದಿವಾಸಿ ಸಮುದಾಯ ಭವನ ವನ್ನು ಉದ್ಘಾಟಿಸಿ ಮಾತನಾಡಿದರು.


ಕೊರಗ ಸಮುದಾಯದವರುತಾವು ಹಿಂದೆ ಅನುಭವಿಸಿದ ಶೋಷಣೆ ಮತ್ತುಅದರಿಂದತಮ್ಮಲ್ಲಿಉಂಟಾಗಿರುವ ಕೀಳಿರಿಮೆಯನ್ನು ತೊರೆಯಲು ಶಿಕ್ಷಣದಿಂದ ಸಾಧ್ಯ, ಶಿಕ್ಷಣ  ಪಡೆಯುವುದರಿಂದ ಮಾನಸಿಕವಾಗಿ  ಸದೃಡರಾಗಲು ಸಾಧ್ಯವಿದ್ದು, ತಮ್ಮ ಮಕ್ಕಳಿಗೆತಪ್ಪದೇ ಶಿಕ್ಷಣ ಕೊಡಿಸಬೇಕು.ಇತರೆ ಸಮುದಾಯದವರೂ ಸಹ ಕೊರಗ ಸಮುದಾಯದ ಸಮಗ್ರಅಭಿವೃಧ್ದಿಗೆ ಹಾಗೂ ಅವರು ಸಮಾಜದಲ್ಲಿಇತರೆ ವರ್ಗದೊಂದಿಗೆ ಮುಕ್ತವಾಗಿ ಬೆರೆಯುವ ವಾತಾವರಣ ನಿರ್ಮಿಸಲು ಸರ್ವರೀತಿಯಲ್ಲೂ ಸಹಕಾರ ನೀಡಬೇಕುಎಂದರು.


ಪ್ರಸ್ತುತ ನಿರ್ಮಿಸಿರುವ ಸಮುದಾಯ ಭವನವುಕೊರಗ ಸಮುದಾಯದಆತ್ಮ ವಿಶ್ವಾಸದ ಸಂಕೇತವಾಗಿದ್ದು, ಈ ಭವನದಲ್ಲಿ ಸಭೆಗಳು, ಚರ್ಚೆಗಳು, ವಿಚಾರಗೋಷ್ಠಿಗಳು ನಡೆಯಲು ಅನುಕೂಲವಾಗುವಂತೆ ಸೂಕ್ತ ವ್ಯವಸ್ಥೆಗಳು ಮತ್ತುತಾಂತ್ರಿಕ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದರು.


ಇದೇ ಸಂದರ್ಭದಲ್ಲಿಕೊರಗ ಸಮುದಾಯದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಹಾಯಧನದಚೆಕ್ ಗಳನ್ನು ಶಾಸಕರು ವಿತರಿಸಿದರು.


ರಾಜ್ಯ ಹಿಂದುಳಿದ ವರ್ಗಗಳ ಆಯೋಗದಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಕೊರಗ ಸಮುದಾಯದ ಅನೇಕರಿಗೆ ಇನ್ನೂ ಉಚಿತ ಭೂಮಿ ದೊರೆತಿಲ್ಲ ಈ ಬಗ್ಗೆ ಜಿಲ್ಲಾಡಳಿತ ಗಮನಹರಿಸಿ ಸೂಕ್ತ ಸ್ಥಳ ಗುರುತಿಸಿ ಜಾಗ ನೀಡಬೇಕು, ಪ.ಜಾತಿ ಮತ್ತು ಪ.ವರ್ಗದಲ್ಲಿಅತ್ಯಂತ ಹಿಂದುಳಿದಿರುವ ಈ ಸಮಾಜವು ಶಿಕ್ಷಣ ಮತ್ತು ಉದ್ಯೋಗದಲ್ಲಿ ತುಂಬಾ ಹಿಂದುಳಿದಿದ್ದು, ಈ ಕ್ಷೇತ್ರಗಳಲ್ಲಿ ಇವರಿಗೆ ಹೆಚ್ಚಿನ ಸೌಲಭ್ಯಗಳನ್ನು ದೊರಕಿಸುವಅಗತ್ಯವಿದ್ದು, ಉಳಿದ ಸಮುದಾಯಗಳೂ ಇವರ ಅಭಿವೃಧ್ದಿಗೆ ಕೈಜೋಡಿಸಬೇಕು ಎಂದರು.


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಮಾತನಾಡಿ, ಕೊರಗ ಸಮುದಾಯದವರು ತಮ್ಮ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ನೀಡಬೇಕು, ಜಿಲ್ಲೆಯಲ್ಲಿ ಆಶ್ರಮ ಶಾಲೆಗಳಲ್ಲಿ ಉಚಿತ ಊಟ ವಸತಿಯೊಂದಿಗೆ ಉತ್ತಮ ಶಿಕ್ಷಣ ಸೌಲಭ್ಯಗಳಿದ್ದು, ತಮ್ಮ ಮಕ್ಕಳನ್ನು ಅಲ್ಲಿಗೆ ಸೇರ್ಪಡೆ ಮಾಡಬೇಕು, ಸಮುದಾಯದ ಸಮಗ್ರ ಅಧ್ಯಯನ ಕುರಿತಂತೆ ಸಮೀಕ್ಷೆ ನಡೆಸಲಾಗುತ್ತಿದ್ದು, ಇವರ ಸಮಗ್ರ ಶ್ರೇಯೋಭಿವೃದ್ದಿಗೆ  ಜಿಲ್ಲಾಡಳಿತ ಬದ್ದವಾಗಿದ್ದು, ಜನತೆ ಶಿಕ್ಷಣವಂತರಾಗಿ ಮತ್ತು ಜಾಗೃತರಾಗಿ ತಮಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.


ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆಅಧ್ಯಕ್ಷೆ ಸಮಿತ್ರಾ ನಾಯಕ್ ,ಕುಂದಾಪುರ ಪುರಸಭೆ ಸದಸ್ಯ ಪ್ರಭಾಕರ್, ಉಡುಪಿ ತಾಲೂಕು ಸಮಾಜಕಲ್ಯಾಣಾಧಿಕಾರಿ ರಮೇಶ್, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಹಾಯಕ ಇಂಜಿನಿಯರ್‍ ರಾಮು, ಕೊರಗ ಸಮುದಾಯುದ ಬಾಬು ಪಾಂಗಾಳ, ಬೊಗ್ರಕೊರಗ, ಸಂಜೀವಕೊರಗ, ಸುಶೀಲ ನಾಡ, ಗೌರಿಕೊರಗ ಮತ್ತಿತರರು ಉಪಸ್ಥಿತರಿದ್ದರು. 


ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ದಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ದೂದ್‍ಪೀರ್ ಸ್ವಾಗತಿಸಿದರು.ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top