ಕುಕ್ಕರ್ ಬಾಂಬ್ ಸ್ಫೋಟದ ಹಿಂದೆ ಐಸಿಸ್ ಕೈವಾಡ

Upayuktha
0

ಬಿಜೆಪಿ ಮಾಡಿಸಿದ್ದು ಎಂದು ಹೇಳಿದ ಕಾಂಗ್ರೆಸ್ ನಾಯಕರು ಎಲ್ಲಿದ್ದಾರೆ?

ಶಾಸಕ ಡಾ. ಭರತ್ ಶೆಟ್ಟಿ ಪ್ರಶ್ನೆ


ಸುರತ್ಕಲ್: ಮಂಗಳೂರಿನಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಕುಖ್ಯಾತ ಉಗ್ರ ಸಂಘಟನೆ ಐಸಿಸ್ ತಾನು ಮಾಡಿದ್ದಾಗಿ ಹೇಳಿದ್ದು ಅತ್ಯಂತ ಆತಂಕದ ವಿಚಾರ. ಅದರೆ ಈ ಹಿಂದೆ ಬಿಜೆಪಿ ಗಿಮಿಕ್ ಎಂದು ಹೇಳಿದ ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಈಗೆಲ್ಲಿದ್ದಾರೆ ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತ ಪಡಿಸಿದರು.


ಚುನಾವಣೆ ಬಂದಾಗ ಬಿಜೆಪಿ ಈ ರೀತಿ ಮಾಡುತ್ತದೆಎಂದು ಹೇಳುದ ಕಾಂಗ್ರೆಸ್ ಬೇಷರತ್‌ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿರುವ ಶಾಸಕರು, ತನಿಖೆಯ ಮುನ್ನವೇ ಬಾಲಿಶ ಹೇಳಿಕೆ ನೀಡಿದ ಪಕ್ಷ ಇದೀಗ ನಗೆ ಪಾಟಲಿಗೆ ಒಳಗಾಗಿದೆ.


ಎನ್‌ಐಎ ಈ ಪ್ರಕರಣ ಭೇದಿಸಿ ಸಮರ್ಪಕ ಕ್ರಮ ಕೈಗೊಳ್ಳಲು ಶಕ್ತವಾಗಿದೆ. ಭಯೋತ್ಪಾದಕ ಕೃತ್ಯ ಬುಡ ಸಹಿತ ಕಿತ್ತುಹಾಕಲು ಬಿಜೆಪಿ ಸರಕಾರ ಬದ್ದವಾಗಿದೆ ಎಂದು ಹೇಳಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top