ನರೇಂದ್ರ ಮರಸಣಿಗೆ ಅವರಿಗೆ ಪ.ಗೋ. ಪ್ರಶಸ್ತಿ

Upayuktha
0


ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೆ ವಿಜಯವಾಣಿ ಹೆಬ್ರಿ ವರದಿಗಾರ ನರೇಂದ್ರ  ಎಸ್. ಮರಸಣಿಗೆ ಆಯ್ಕೆಯಾಗಿದ್ದಾರೆ.


ನರೇಂದ್ರ ಅವರ ವಿಶೇಷ ವರದಿ 'ಮತ್ತಾವುಗೆ ಮತ್ಯಾವಾಗ ಸೇತುವೆ' ಜು.28ರಂದು  ವಿಜಯವಾಣಿ ದಿನಪತ್ರಿಕೆಯಲ್ಲಿ ಪ್ರಕಟಗೊಂಡಿತ್ತು.


ಹಿರಿಯ ಪತ್ರಕರ್ತ ಕೇಶವ ಕುಂದರ್, ಪತ್ರಿಕೋದ್ಯಮ ಉಪನ್ಯಾಸಕ ಪ್ರಸಾದ್, ಸಾಹಿತಿ ಜಯಶ್ರೀ ಅವರನ್ನೊಳಗೊಂಡ ಆಯ್ಕೆ ಸಮಿತಿಯು ವರದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಶಸ್ತಿಯು 10001 ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿವೆ. 

 

ಪರಿಚಯ: ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಮರಸಣಿಗೆಯ ನರೇಂದ್ರ ಅವರು ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರ. ಕಳೆದ ಮೂರು ವರ್ಷಗಳಿಂದ  ಹೆಬ್ರಿ ವಿಜಯವಾಣಿ ವರದಿಗಾರ. 


ಗ್ರಾಮೀಣ ಭಾಗದ ಅನೇಕ ಸಮಸ್ಯೆಗಳನ್ನು  ಪತ್ರಿಕೆ ಮೂಲಕ ಸರಕಾರದ ಗಮನ ಸೆಳೆದಿದ್ದಾರೆ. ಪ್ರಸ್ತುತ ಕೆಎಸ್‌ಒಯು ನಿಂದ ಎಂಬಿಎ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.


ಪ್ರಶಸ್ತಿ ಪ್ರದಾನ ಸಮಾರಂಭ:

ಪ್ರಶಸ್ತಿ ಪ್ರದಾನ ಸಮಾರಂಭ ಮಾ.28ರಂದು ಬೆಳಗ್ಗೆ 11:00 ಗಂಟೆಗೆ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆಯಲಿದೆ. ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಂಜಪ್ಪ  ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಹಿರಿಯ ಪತ್ರಕರ್ತ ಶ್ರೀಕರ ಎಲ್. ಭಂಡಾರ್ಕರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸುವರು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top