ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ ರಜತ ಮಹೋತ್ಸವ: ಏ.2ರಂದು ನೂತನ ಕಟ್ಟಡ ಲೋಕಾರ್ಪಣೆ

Upayuktha
0

ಮಂಗಳೂರು: ದುಡಿಯುವ ಮನಸ್ಸು ಮತ್ತು ಸಾಧಿಸುವ ಛಲ ಇರುವ ಸಾವಿರಾರು ಕಿರು ಕಸುಬುದಾರರಿಗೆ ನೆರವಿನ ಹಸ್ತಚಾಚುವ ಮೂಲಕ ಜನಸಾಮಾನ್ಯರಿಗೂ ಬದುಕು ಕಟ್ಟುವ ಭರವಸೆ ನೀಡಿದ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ಇದೀಗ ರಜತ ಮಹೋತ್ಸವ ಸಂಭ್ರಮದಲ್ಲಿದೆ.


ನಿರಂತರ 25 ವರ್ಷಗಳ ಸಾರ್ಥಕ ಸಹಕಾರ ಸೇವಾ ಪರಂಪರೆಯನ್ನು ಮುಂದುವರಿಸಿರುವ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ ರಜತಮಹೋತ್ಸವ ಸವಿನೆನಪಿಗಾಗಿ ಮಂಗಳೂರಿನ ಜೆಪ್ಪು ಮೋರ್ಗನ್ಸ್ ಗೇಟ್ ರಾಮಕ್ಷತ್ರಿಯ ಮಂದಿರದ ಬಳಿ ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡವನ್ನು ನಿರ್ಮಿಸಲಾಗಿದೆ. ಈ ನೂತನ ಕಟ್ಟಡದಲ್ಲಿ ಹೊಸ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ.


ಸಹಕಾರಿ ಸಂಘದ ಬೆಳ್ಳಿಹಬ್ಬದ ಸಂಭ್ರಮ ಹಾಗೂ ನೂತನ ಕಟ್ಟಡದಲ್ಲಿ ಸೌಲಭ್ಯಗಳ ಲೋಕಾರ್ಪಣೆ ಸಮಾರಂಭವು ಸಹಕಾರಿ ಸಂಘದ ಅಧ್ಯಕ್ಷರು ಮತ್ತು ಕರ್ನಾಟಕ ಸರಕಾರದ ಮಾಜಿ ಸಚಿವರಾದ ಜೆ. ಕೃಷ್ಣ ಪಾಲೇಮಾರ್ ಅಧ್ಯಕ್ಷತೆಯಲ್ಲಿ ಏ.2ರಂದು ಜರಗಲಿದೆ.


ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದ ಕ ಲೋಕಸಭಾ ಕ್ಷೇತ್ರದ ಸದಸ್ಯರಾದ ನಳಿನ್ ಕುಮಾರ್ ಕಟೀಲು, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಡಿ. ವೇದವ್ಯಾಸ ಕಾಮತ್, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಜಯಾನಂದ ಅಂಚನ್, ನಿಟ್ಟೆ ವಿಶ್ವ ವಿದ್ಯಾಲಯದ ಸಹಕುಲಪತಿಗಳಾದ ಡಾ. ಶಾಂತಾರಾಮ ಶೆಟ್ಟಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ) ಇದರ ಅಧ್ಯಕ್ಷರಾದ ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಜೆ.ಆರ್. ಲೋಬೊ, ಸಹಕಾರ ಸಂಘಗಳ ಉಪ ನಿಬಂಧಕರಾದ ಹೆಚ್.ಎನ್. ರಮೇಶ್, ಮಹಾನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಭಾನುಮತಿ ಪಿ.ಎಸ್. ಭಾಗವಹಿಸಲಿದ್ದಾರೆ.


ಈ ಸಂಬಂಧ ಗುರುವಾರ ಸಂಜೆ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷರಾದ  ಜೆ. ಕೃಷ್ಣ ಪಾಲೇಮಾರ್, ಉಪಾಧ್ಯಕ್ಷರಾದ ಕೆ. ದಿನೇಶ್ ರಾವ್, ನಿರ್ದೇಶಕರಾದ ರಾಮಚಂದ್ರ ಕೆ.ಎಸ್., ಜೆ.ಕೆ.ರಾವ್, ಪಿ. ಬಾಬು, ಕೆ.ಎಸ್. ರಂಜನ್, ಶ್ರೀಮತಿ  ವಾರಿಜ ಕೆ., ಡಾ. ಎಚ್. ಪ್ರಭಾಕರ್, ಡಾ. ಮಂಜುಳಾ ಎ. ರಾವ್, ಕೆ. ರವೀಂದ್ರ, ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಸಾದ್ ಪಿ.ಎ ಅವರು ಉಪಸ್ಥಿತರಿದ್ದರು.


ಸಂಘ ನಡೆದು ಬಂದ ದಾರಿ:

ಸಮಾಜದ ಉನ್ನತಿ ಮತ್ತು ಸಾಮಾನ್ಯ ಜನರಿಗೆ ಆರ್ಥಿಕ ನೆರವು ನೀಡುವ ಮಹತ್ತರ ಉದ್ದೇಶದಿಂದ ಮಾಜಿ ಸಚಿವ ಶ್ರೀ ಜೆ. ಕೃಷ್ಣ ಪಾಲೆಮಾರ್ ಅವರ ಮಾರ್ಗದರ್ಶನದಲ್ಲಿ 1997ರ ಡಿಸೆಂಬರ್ 7ರಂದು ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ)ವನ್ನು ಸ್ಥಾಪಿಸಲಾಯಿತು.


1997ರಲ್ಲಿ ಕೇವಲ 3 ಲಕ್ಷ ರೂ. ಮೂಲ ಬಂಡವಾಳದೊAದಿಗೆ 9 ಜನ ನಿರ್ದೇಶಕರು ಮತ್ತು ೮೦೦ ಶೇರುದಾರರೊಂದಿಗೆ ಆರಂಭಗೊಂಡ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ಇಂದು 2.8 ಕೋಟಿ ರೂ. ಕೋಟಿ ಬಂಡವಾಳದೊಂದಿಗೆ  ಸುಮಾರು 5,500ಕ್ಕೂ ಹೆಚ್ಚು ಶೇರುದಾರರನ್ನು ಹೊಂದಿದ್ದು, ವಾರ್ಷಿಕವಾಗಿ ಸುಮಾರು ರೂ. 400 ಕೋಟಿಗೂ ಮಿಕ್ಕಿ ವ್ಯವಹಾರವನ್ನು ನಡೆಸುವ ಮೂಲಕ ಸಮಾಜಕ್ಕೆ ಹಲವು ಉತ್ತಮ ಸೇವಾ ಸೌಲಭ್ಯಗಳು ಮತ್ತು ಆರ್ಥಿಕ ಸಂಕಷ್ಟದಲ್ಲಿರುವ ಬಡವರ್ಗದವರಿಗೆ ಸಹಾಯ ಹಸ್ತ ಚಾಚುವ ಮೂಲಕ ಸಂಘವು ಉನ್ನತ ಮಟ್ಟಕ್ಕೇರಲು ಸಾಧ್ಯವಾಗಿದೆ. ಸಂಘವು 20222ರ ಸಾಲಿನಲ್ಲಿ 1 ಕೋಟಿಗೂ ಮಿಕ್ಕಿ ಲಾಭ ಪಡೆದಿದ್ದು, ಗ್ರಾಹಕರಿಗೆ ಶೇ. 20 ಡಿವಿಡೆಂಡ್ ನೀಡಿದೆ. ಸಂಘ ಸ್ಥಾಪನೆಯಾದ ವರ್ಷದಿಂದ ಈ ವರೆಗೆ ಎ ಗ್ರೇಡ್ ಮಾನ್ಯತೆ ಪಡೆದಿರುತ್ತದೆ.


ವೃತ್ತಿ ಬದುಕಿನ ಆಸರೆ ಅರಸುವ ಶ್ರೀಸಾಮಾನ್ಯರಿಗೆ ಸಂಘವು ದಾರಿದೀಪವಾಗಿದೆ. ೨೫೦೦ಕ್ಕೂ ಮಿಕ್ಕಿ ರಿಕ್ಷಾ ಚಾಲಕರಿಗೆ ಸಾಲ ಸೌಲಭ್ಯವನ್ನು ಒದಗಿಸಿ ಮಾಲಕರನ್ನಾಗಿ ರೂಪಿಸಿದ ಸಂಘವು ಬೀದಿ ವ್ಯಾಪಾರಿಗಳು, ತರಕಾರಿ ಮಾರಾಟಗಾರರು ಮುಂತಾದ ಸಾವಿರಾರು ಸಣ್ಣಪುಟ್ಟ ವೃತ್ತಿ ಬಾಂಧವರಿಗೆ ಮೂಲ ಬಂಡವಾಳಕ್ಕಾಗಿ ಸಾಲ ನೀಡುವ ಮೂಲಕ ಸ್ವಾವಲಂಬಿ ಬದುಕಿಗೆ ಪ್ರೇರಣೆ ನೀಡಿದೆ. ಸಾಲ ಸಹಕಾರದೊಂದಿಗೆ ಗ್ರಾಹಕರಿಗೆ ಸೂಕ್ತ ವೃತ್ತಿ ಮಾರ್ಗದರ್ಶನ ಕೂಡಾ ಕಾಲಕಾಲಕ್ಕೆ ನೀಡಲಾಗುತ್ತಿದೆ.


ಸಂಘವು ಉಚಿತ ಕಣ್ಣು ತಪಾಸಣೆ ಶಿಬಿರ, ರಕ್ತದಾನ ಶಿಬಿರ, ಸದಸ್ಯರ ಮಕ್ಕಳಿಗೆ ಶಿಕ್ಷಣಕ್ಕೆ ಸಹಾಯ ಮತ್ತು ಹಲವು ಸಂಘ ಸಂಸ್ಥೆಗಳಿಗೆ ಸಹಾಯಧನ ನೀಡುವುದರ ಮೂಲಕ ಸಮಾಜ ಸೇವೆಗೂ ಬದ್ಧವಾಗಿದೆ.


ಇಂದು ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ಮೋರ್ಗನ್ಸ್ ಗೇಟ್‌ನಲ್ಲಿ ಪ್ರಧಾನ ಕಚೇರಿ ಮತ್ತು ಶಾಖೆಯನ್ನು ಹೊಂದಿದ್ದು, ಹಂಪನಕಟ್ಟೆ, ಕಾವೂರು, ಕಾಟಿಪಳ್ಳ-ಕೈಕಂಬ ಮತ್ತು ಉಳ್ಳಾಲ ಮುಂತಾದೆಡೆ 5 ಶಾಖಾ ಕಚೇರಿಗಳನ್ನು ಹೊಂದಿದೆ.

ರಜತ ಮಹೋತ್ಸವದ ವಿಶೇಷ ಕೊಡುಗೆ: 

ಸಮೃದ್ಧಿ ನಗದು ಪತ್ರ- ಇತರರಿಗೆ 9% ಬಡ್ಡಿ ಮತ್ತು ಹಿರಿಯ ನಾಗರಿಕರಿಗೆ 9.5% ಬಡ್ಡಿ


ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ಇದರ ಸೇವಾ ಸೌಲಭ್ಯಗಳು

• ಠೇವಣಿ ಯೋಜನೆಗಳು

• ಉಳಿತಾಯ ಖಾತೆಗಳು

• ಸಾಲಗಳು (ಬಡ್ಡಿ ಮತ್ತು ಕೊಡುಗೆಗಳು)

• ಆಭರಣ ಸಾಲ

• ೧ ವರ್ಷಕ್ಕೆ ಆಭರಣ ಸಾಲ

• ೬ ತಿಂಗಳ ಎಕ್ಸ್ಪ್ರೆಸ್ ಜ್ಯುವೆಲ್ ಲೋನ್ 

• ೩ ತಿಂಗಳ ಸೂಪರ್ ಎಕ್ಸ್ಪ್ರೆಸ್ ಜ್ಯುವೆಲ್ ಲೋನ್

• ವ್ಯಾಪಾರ ಸಾಲ - 14%

• ವಸತಿ ಅಡಮಾನ ಸಾಲ - 14%

• ವಾಹನ ಸಾಲ (ಹೊಸ ಆಟೋರಿಕ್ಷಾಗಳಿಗೆ) - 11%

• ಕಾರ್ ಲೋನ್‌ಗೆ ಕನಿಷ್ಠ ದಾಖಲೆ, ತ್ವರಿತ ಮಂಜೂರಾತಿ.

• ಲಾಕರ್ ಸೌಲಭ್ಯ

• ನೆಫ್ಟ್, ಆರ್‌ಟಿಜಿಎಸ್ 

• ಯಶಸ್ವಿನಿ ಯೋಜನೆ

• ವಾಹನ ವಿಮೆ

• ಇ-ಸ್ಟ್ಯಾಂಪ್

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top