ಬುಕ್‌ ಬ್ರಹ್ಮ: ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ

Upayuktha
0

ಬೆಂಗಳೂರು: ಬುಕ್ ಬ್ರಹ್ಮ ಸಂಸ್ಥೆಯು ನಾಲ್ಕನೇ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ 'ಸ್ವಾತಂತ್ರ್ಯೋತ್ಸವ ಕಥಾ ಸ್ಫರ್ಧೆ'ಗೆ ಕಥೆಗಳನ್ನು ಮತ್ತು 'ಕಾದಂಬರಿ ಪುರಸ್ಕಾರಕ್ಕೆ' ಕಾದಂಬರಿಗಳನ್ನು ಆಹ್ವಾನಿಸಿದೆ.


2022ನೇ ಸಾಲಿನಲ್ಲಿ ಪ್ರಕಟಗೊಂಡ ಅತ್ಯುತ್ತಮ ಕಾದಂಬರಿಗೆ ಒಂದು ಲಕ್ಷ ರೂ. ನಗದು ಬಹುಮಾನ ನೀಡಲಾಗುವುದು. ಒಂದು ಲಕ್ಷದಲ್ಲಿ 75 ಸಾವಿರ ರೂ. ಲೇಖಕರಿಗೆ ಹಾಗೂ 25 ಸಾವಿರ ಪ್ರಕಾಶಕರಿಗೆ ವಿತರಿಸಲಾಗುವುದು. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ರೂ. ಬಹುಮಾನ ನೀಡಲಾಗುವುದು. ಈ ಪೈಕಿ 3 ಸಾವಿರ ರೂ. ಲೇಖಕರಿಗೆ ಹಾಗೂ 2 ಸಾವಿರ ರೂ. ಪ್ರಕಾಶಕರಿಗೆ ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.


ಕಥಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಕಥೆಗೆ 50 ಸಾವಿರ ರೂ. ನಗದು ಬಹುಮಾನ ಇರಲಿದೆ. ದ್ವೀತಿಯ ಸ್ಥಾನ ಪಡೆಯುವ ಕಥೆಗೆ 25 ಸಾವಿರ ರೂ., ತೃತೀಯ ಸ್ಥಾನಕ್ಕೆ 15 ಸಾವಿರ ರೂ. ನಗದು ಬಹುಮಾನ ಇರಲಿದೆ. ಉಳಿದಂತೆ ಐದು ಕಥೆಗಳಿಗೆ ತಲಾ 5 ಸಾವಿರ ನಗದನ್ನು ಒಳಗೊಂಡ ಸಮಾಧಾನಕರ ಬಹುಮಾನ ಹಾಗೂ ಅಂತಿಮ ಸುತ್ತಿಗೆ ಆಯ್ಕೆಯಾಗುವ ಉಳಿದ 17 ಕಥೆಗಳಿಗೆ ತಲಾ ಎರಡು ಸಾವಿರ ರೂಪಾಯಿ ನೀಡಲಾಗುತ್ತದೆ. ಆಯ್ಕೆಯಾದ ಈ 25 ಕಥೆಗಳನ್ನು ಒಳಗೊಂಡ ಪುಸ್ತಕ ಪ್ರಕಟಿಸಲಾಗುತ್ತದೆ.


ಕಾದಂಬರಿ ಪುರಸ್ಕಾರಕ್ಕೆ ಕಾದಂಬರಿಯ ನಾಲ್ಕು ಪ್ರತಿಗಳನ್ನು ಏ. 15 ರೊಳಗೆ ಕಳುಹಿಸಬೇಕು. ಕಥಾ ಸ್ಪರ್ಧೆಗೆ ಕಥೆಗಳನ್ನು ಕಳುಹಿಸಲು ಮೇ. 31 ಕೊನೆಯ ದಿನ. ಆಗಸ್ಟ್ 15ರಂದು ನಡೆಯಲಿರುವ ಸಮಾರಂಭದಲ್ಲಿ ಕಥೆಗಳ ಘೋಷಣೆ ಮತ್ತು ಪ್ರಶಸ್ತಿ ವಿತರಣೆ ಮಾಡಲಾಗುವುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.


ಕಾದಂಬರಿ ಪುರಸ್ಕಾರ ನಿಯಮಗಳು

  • ಕಾದಂಬರಿ ಸ್ವತಂತ್ರವಾಗಿರಬೇಕು ಮತ್ತು 2022ರಲ್ಲಿ ಮೊದಲ ಮುದ್ರಣಗೊಂಡಿರಬೇಕು.
  • ಅನುವಾದ ಹಾಗೂ ಭಾಷಾಂತರಗೊಂಡ ಕಾದಂಬರಿಗಳನ್ನು ಪರಿಗಣಿಸುವುದಿಲ್ಲ.
  • ಆ.1ರಂದು ಅಂತಿಮ ಸುತ್ತನ್ನು ಪ್ರವೇಶಿಸುವ 5 ಕಾದಂಬರಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು.
  • ಅಂತಿಮ ಸುತ್ತಿಗೆ ಆಯ್ಕೆಯಾದ ಕಾದಂಬರಿಕಾರರು ಬಹುಮಾನ ವಿತರಣಾ ಸಮಾರಂಭದಲ್ಲಿ ತಪ್ಪದೇ ಭಾಗವಹಿಸಬೇಕು. ಸಮಾರಂಭದ ದಿನ ಬೆಳಿಗ್ಗೆ ನಡೆಯುವ ʻಕಥಾ-ಕಾದಂಬರಿ ಸಂವಾದ’ದಲ್ಲಿ ಭಾಗವಹಿಸುವುದು ಅಪೇಕ್ಷಣೀಯ.

 

ಕಥಾ ಸ್ಪರ್ಧೆ ನಿಯಮಗಳು

  • ಕಥೆಯು ಸ್ವತಂತ್ರವಾಗಿರಬೇಕು. ಅನುವಾದ, ಅನುಕರಣವಾಗಿರಬಾರದು.
  • ಕಥೆಯು ಅಪ್ರಕಟಿತವಾಗಿರಬೇಕು. ಮುದ್ರಣ ಅಥವಾ ಯಾವುದೇ ವಿದ್ಯುನ್ಮಾನ ಮಾಧ್ಯಮ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರಬಾರದು.
  • ಕಥೆಗೆ ಯಾವುದೇ ರೀತಿಯ ಪದಮಿತಿ ಇರುವುದಿಲ್ಲ.
  • ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ವಯಸ್ಸಿನ ನಿರ್ಬಂಧ ಇಲ್ಲ
  • ಹಸ್ತಪ್ರತಿ ಅಥವಾ ಟೈಪ್ ಮಾಡಿದ ಕಥೆಯಿರುವ ಪುಟಗಳಲ್ಲಿ ಹೆಸರನ್ನು ದಾಖಲಿಸಬಾರದು. ಕಥೆ ಮುಗಿದ ನಂತರ ಪ್ರತ್ಯೇಕ ಪುಟದಲ್ಲಿ ತಮ್ಮ ಹೆಸರು, ಪೂರ್ಣ ವಿಳಾಸ ಮತ್ತು ಮೊಬೈಲ್ ಸಂಖ್ಯೆ ಇರಬೇಕು.
  • ಕಥೆಗಾರರು ನಿಬಂಧನೆಗಳಿಗೆ ಒಪ್ಪಿದ ಮತ್ತು ಸಹಿ ಮಾಡಿದ ಪ್ರತ್ಯೇಕ ಒಂದು ಪತ್ರ ಇಡಬೇಕು.
  • ಆ.1ರಂದು ಅಂತಿಮ ಸುತ್ತನ್ನು ಪ್ರವೇಶಿಸುವ 25 ಕಥೆಗಳ ಪಟ್ಟಿಯನ್ನು ಪ್ರಕಟಿಸಲಾಗುವುದು.
  • ಅಂತಿಮ ಸುತ್ತಿಗೆ ಆಯ್ಕೆಯಾದ ಕಥೆಗಳನ್ನು ಪುಸ್ತಕ, ಇ-ಪುಸ್ತಕ, ಆಡಿಯೋ ಪುಸ್ತಕದ ರೂಪದಲ್ಲಿ ಪ್ರಕಟಿಸಲಾಗುತ್ತದೆ. 
  •  ಅಂತಿಮ ಸುತ್ತಿಗೆ ಆಯ್ಕೆಯಾದ ಕಥೆಗಾರರು ಬಹುಮಾನ ವಿತರಣಾ ಸಮಾರಂಭದಲ್ಲಿ ತಪ್ಪದೇ ಭಾಗವಹಿಸಬೇಕು. ಸಮಾರಂಭದ ದಿನ ಬೆಳಿಗ್ಗೆ ನಡೆಯುವ ʻಕಥಾ-ಕಾದಂಬರಿ ಸಂವಾದ’ದಲ್ಲಿ ಭಾಗವಹಿಸುವುದು ಅಪೇಕ್ಷಣೀಯ.
  • ಒಬ್ಬರು ಒಂದು ಕಥೆಯನ್ನು ಮಾತ್ರ ಕಳಿಸಬೇಕು. ಕಾದಂಬರಿ ಸ್ಪರ್ಧೆಗೆ ಪುಸ್ತಕ ಕಳುಹಿಸಿದವರೂ ಕೂಡ ಕಥೆಗಳನ್ನು ಕಳುಹಿಸಬಹುದು.
  • ಕಥೆಗಳನ್ನು ಈ-ಮೇಲ್ ಮೂಲಕ (ನುಡಿ/ಯೂನಿಕೋಡ್ ಫಾಂಟ್ ಬಳಸಿ ಟೈಪ್ ಮಾಡಿದ ಪ್ರತಿ) bbks2023@bookbrahma.com ಗೆ ಕಳುಹಿಸಬಹುದು. 


ಕಾದಂಬರಿ ಹಾಗೂ ಕಥೆಗಳನ್ನು ಕಳುಹಿಸಬೇಕಾದ ವಿಳಾಸ: 


ಪ್ರಧಾನ ಸಂಪಾದಕರು, ಬುಕ್ ಬ್ರಹ್ಮ - ಕನ್ನಡ, ಮೂರನೇ ಮಹಡಿ, ಆರ್. ಕೆ ಕಾಂಪ್ಲೆಕ್ಸ್, ಕೆಎಸ್ಎಸ್ಐಡಿಸಿ ಕಾಂಪೌಂಡ್, ಎಲೆಕ್ಟ್ರಾನಿಕ್ಸ್ ಸಿಟಿ ಮೊದಲ ಹಂತ, ಬೆಂಗಳೂರು- 560100 

 

ಸಂಪರ್ಕಿಸಿ: 78926 08118


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter



 


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top