ತುಂತುರು ನೀರಾವರಿ ಘಟಕಕ್ಕೆ ಸಹಾಯಧನ : ಅರ್ಜಿ ಆಹ್ವಾನ

Upayuktha
0

ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿತುಂತುರು ನೀರಾವರಿಘಟಕಕ್ಕೆಎಲ್ಲಾ ವರ್ಗದರೈತರಿಂದ 2 ಹೆ. ವರೆಗೆ ಶೇ.90 ಹಾಗೂ 2 ಹೆ.ನಿಂದ 5 ಹೆ.ವರೆಗೆ ಶೇ.45 ರಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

 

ಆಸಕ್ತ ರೈತರು ಆಧಾರ್ ಪ್ರತಿ, ಪಹಣಿ ಪತ್ರ, ಬ್ಯಾಂಕ್‍ಖಾತೆ ಪ್ರತಿ, ಛಾಪಾಕಾಗದ, ಜಾತಿ ಪ್ರಮಾಣ ಪತ್ರ, ನೀರಿನ ಲಭ್ಯತೆಯ ಪ್ರಮಾಣ ಪತ್ರ, ತೋಟಗಾರಿಕೆ, ರೇಷ್ಮೆಇಲಾಖೆಯ ಸದರಿಘಟಕಕ್ಕೆ ಸಹಾಯಧನ ಪಡೆಯದಿರುವ ಬಗ್ಗೆ ದೃಢೀಕರಣ ಪತ್ರ, ಕಂದಾಯ ಇಲಾಖೆಯಿಂದ ಪಡೆದ ಸಣ್ಣ, ಅತಿಸಣ್ಣರೈತರ ಹಿಡುವಳಿ ಪ್ರಮಾಣ ಪತ್ರ, ಮತ್ತು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಸಂಬಂಧಪಟ್ಟ ಹೋಬಳಿ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top