ಉಜಿರೆ: ವಿದ್ಯೆಯ ಉದ್ದೇಶ ಕೇವಲ ಜ್ಞಾನ ಸಂಪಾದನೆ ಮಾತ್ರವಲ್ಲ ನಮ್ಮ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಧನಾತ್ಮಕ ಧೋರಣೆಯು ಅಗತ್ಯ. ಜೀವನದಲ್ಲಿ ಶಾಂತಿ ನೆಮ್ಮದಿ ಯಶಸ್ಸು ಬೇಕಾದರೆ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಆಗ ನೀವು ಸಮಾಜಕ್ಕೆ ಒಳ್ಳೆಯ ಆಸ್ತಿ ಆಗಬಲ್ಲಿರಿ. ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ನಿಮ್ಮ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತಿದೆ ಎಂದು ಡಾ. ಸತೀಶ್ಚಂದ್ರ ಎಸ್. ಅವರು ನುಡಿದರು.
ಅವರು ಶ್ರೀ ಧ.ಮಂ ಮಹಿಳಾ ಐಟಿಐ ಉಜಿರೆ ಇಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿದರು. ಅಷ್ಟೇ ಅಲ್ಲ ಮಾತೃಶ್ರೀ ಡಾ.ಹೇಮಾವತಿ ವಿ ಹೆಗ್ಗಡೆಯವರ ಆಶಯದಂತೆ ಮಹಿಳಾ ಸಬಲೀಕರಣ ಇದಕ್ಕೆ ಪೂರಕವಾದ ವಾತಾವರಣ ಇಲ್ಲಿ ನಿರ್ಮಾಣವಾಗಿರುವುದು ಸಂತೋಷದ ವಿಷಯ ಜೊತೆಗೆ ಸ್ವಚ್ಚ, ಸುಂದರ, ಸುಸಂಸ್ಕೃತ ಹಾಗೂ ಶಿಸ್ತು ಬದ್ದವಾದ ವಾತಾವರಣ ಇಲ್ಲಿ ನಿರ್ಮಾಣವಾಗಿರುವುದು ಸಂತೋಷ ಪಡುತ್ತೇವೆ ಎಂದು ಈ ಸಂದರ್ಭದಲ್ಲಿ ಹೇಳಿ ಕಾರ್ಯಕ್ರಮಕ್ಕೆ ಶುಭ ಕೋರಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರಿನ ಸಾವುಕಾರ್ ಟೆಕ್ಸ್ಟೈಲ್ಸ್ ಮತ್ತು ಯುನಿಫಾರ್ಮ್ಸ್ ಇದರ ವ್ಯವಸ್ಥಾಪಕ ಪಾಲುದಾರರಾದ ಪ್ರಕಾಶ್ ಭಂಡಾರಿ ಕುತ್ತೆತ್ತೂರು ಇವರು ವಿದ್ಯೆಗೆ ವಿನಯವೇ ಭೂಷಣ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಂಸ್ಥೆಯು ವಿದ್ಯಾರ್ಥಿಗಳ ಜೊತೆ ನಿರಂತರ ಸಂಪರ್ಕವನ್ನು ಇಟ್ಟುಕೊಳ್ಳುವುದು ಉತ್ತಮ. ಪೂಜ್ಯರ ದೂರದೃಷ್ಟಿತ್ವ ಹಾಗೂ ಹಸಿದವನಿಗೆ ಒಂದು ಹೊತ್ತು ಊಟ ಕೊಡುವ ಬದಲು ಒಂದು ಹೊತ್ತಿನ ಊಟ ಉತ್ಪಾದಿಸುವ ವಿಧಾನ ಹೇಳಿಕೊಡುವುದು ಪೂಜ್ಯರ ವಿಶೇಷ ಗುಣ. ಇಟ್ಟ ಹೆಜ್ಜೆ ಹಿಂದೆ ಇಡಬೇಡಿ ಧೈರ್ಯದಿಂದ ಮುನ್ನಡೆಯಿರಿ ಶುಭವಾಗಲಿ ಎಂದು ಹೇಳಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವೇಣೂರು ಐಟಿಐ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಇವರು ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿನಿಯರ ಹೆತ್ತವರು ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ಸಂಸ್ಥೆಯ ವಾರ್ಷಿಕ ವರದಿಯನ್ನು ಪ್ರಾಂಶುಪಾಲರು ಮಂಡಿಸಿದರು. ಕು ಸಮೀಕ್ಷಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ಪ್ರಜ್ಞಾ ಸ್ವಾಗತ ಮಾಡಿದ ಈ ಕಾರ್ಯಕ್ರಮದಲ್ಲಿ ರ್ಮೇಘನಾ ಧನ್ಯವಾದಗಳನ್ನು ಅರ್ಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ